FactCheck:ದರ್ಶನ್ ಕೊ ಲೆ ಕೇಸ್ ಗೆ ಯಾವುದೇ ಸಾಕ್ಷಿ ಇಲ್ಲ, ಕೋರ್ಟ್ ತೀರ್ಪು ಬಳಿಕ ದೇವಾಲಯಕ್ಕೆ ಭರ್ಜರಿ ಎಂಟ್ರಿ ಕೊಟ್ಟ ದಾಸ
Apr 23, 2025, 15:03 IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲಿನಿಂದ ಜಾಮೀನಿನ ಮೇಲೆ ರಿಲೀಸ್ ಆದ ಮೇಲೆ ತಮ್ಮ ಹೆಚ್ಚಿನ ಗಮನವನ್ನು ಸಿನಿಮಾದ ಮೇಲೆ ನೀಡಿದ್ದಾರೆ. ಅವರ ನಟನೆಯ ದಿ ಡೆವಿಲ್ ಸಿನಿಮಾ ಶೂಟಿಂಗ್ ಬಿರುಸಿನಿಂದ ಸಾಗಿದೆ. ಇನ್ನು, ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದ ದರ್ಶನ್, ಈ ಮಧ್ಯೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಪತ್ನಿ ವಿಜಯಲಕ್ಷ್ಮಿ ಜೊತೆ ಬಂದುಹೋಗಿದ್ದಾರೆ.
ನಿರ್ಮಾಪಕರಾದ ಬಿ. ಸುರೇಶ ಮತ್ತು ಶೈಲಜಾ ನಾಗ್ ದಂಪತಿಯ ಪುತ್ರಿ ಚಂದನಾ ಅವರ ಭರತನಾಟ್ಯ ರಂಗಪ್ರವೇಶ ಸಮಾರಂಭವು ಭಾನುವಾರ ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ನಡೆದಿದೆ. ಈ ಸಮಾರಂಭಕ್ಕೆ ಪತ್ನಿ ವಿಜಯಲಕ್ಷ್ಮಿ ಜೊತೆ ದರ್ಶನ್ ಅವರು ಆಗಮಿಸಿದ್ದರು. ಸದ್ದಿಲ್ಲದೇ ಕಾರ್ಯಕ್ರಮಕ್ಕೆ ವಿಜಯಲಕ್ಷ್ಮಿ ಮತ್ತು ದರ್ಶನ್ ಬಂದುಹೋಗಿದ್ದಾರೆ. ಅವರು ಕಾರ್ಯಕ್ರಮದಲ್ಲಿ ಇರುವ ವಿಡಿಯೋ ಈಗ ವೈರಲ್ ಆಗಿದೆ.
<a href=https://youtube.com/embed/FqW-yrKpGXA?autoplay=1&mute=1><img src=https://img.youtube.com/vi/FqW-yrKpGXA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು ನಡೆದಿದ್ದು, ಈ ವೇಳೆ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧದ ಬಗ್ಗೆ ಪ್ರಶ್ನೆ ಎದುರಾಯಿತು. ಪವಿತ್ರಾ ಗೌಡ ಅವರು ದರ್ಶನ್ ಪತ್ನಿಯೇ ಎಂದು ಜಡ್ಜ್ ಕೇಳಿದರು. ಪತ್ನಿ ಅಲ್ಲ, ಪರಸ್ತ್ರೀ ಎಂದು ರಾಜ್ಯ ಸರ್ಕಾರದ ಪರ ವಕೀಲರು ಮಾಹಿತಿ ತಿಳಿಸಿದರು. ಎರಡೂ ಕಡೆ ವಾದವನ್ನು ಆಲಿಸಲಾಗಿದೆ. ಸದ್ಯಕ್ಕೆ ಈ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ ಆಗಿದೆ.
131 ದಿನಗಳ ಜೈಲುವಾಸದ ನಂತರ ನಟ ದರ್ಶನ್ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಕಳೆದ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇನ್ನು ವಿಚಾರಣೆಯ ನಂತರದಲ್ಲಿ ಕುಟುಂಬ ಸಮೇತವಾಗಿ ದರ್ಶನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.