ಮುದ್ದಾದ ಯುವತಿಯನ್ನು ಬ.ಲಿ ಪಡೆದ ಸರ್ಕಾರಿ ಬಸ್, ಕಂಡಕ್ಟರ್ ಡ್ರೈವರ್ ಒಮ್ಮೆಲೇ ಎಸ್ಕೇಪ್

 

ಅತಿ ವೇಗ, ಅಜಾಗುರಕತೆ ಒಂದು ಜೀವವನ್ನೇ ಬಲಿ ಪಡೆದು ಕೊಂಡಿತು.ಹೌದು ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ನಡೆದಿದೆ. ಬಸ್ ಚಕ್ರ ಹರಿದ ಪರಿಣಾಮ ಸೀಮಾ  ಸ್ಥಳದಲ್ಲೇ ಸಾವನ್ನಪ್ಪಿದರೆ, ಒಂದೂವರೆ ವರ್ಷದ ಹೆಣ್ಣು ಮಗು ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮೂಲತಃ ವಿಜಯನಗರ ಜಿಲ್ಲೆಯವರಾದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಮೃತಳ ಪತಿ ಗುರುಮೂರ್ತಿ ಸಿಂಗಸಂದ್ರದ ಬೆಸ್ಕಾಂ ಘಟಕದಲ್ಲಿ 8 ವರ್ಷದಿಂದ ಲೈನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಬಸ್ ಡಿಕ್ಕಿಯಾಗಿತ್ತು. 

ಡಿಕ್ಕಿಯಾದ ರಭಸಕ್ಕೆ ದಂಪತಿ ನೆಲಕ್ಕೆ ಬಿದ್ದಾಗ ಸೀಮಾ ಅವರ ಮೇಲೆ ಬಸ್‌ನ ಹಿಂಬದಿ ಚಕ್ರ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಚಾಲಕ ಹಾಗೂ ನಿರ್ವಾಹಕರಿಬ್ಬರೂ ಬಸ್ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇಲ್ನೋಟಕ್ಕೆ ಬಿಎಂಟಿಸಿ ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಅಪಘಾತ ಸಂಭವಿಸಿರುವುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  <a href=https://youtube.com/embed/ypFs6r_N7Dw?autoplay=1&mute=1><img src=https://img.youtube.com/vi/ypFs6r_N7Dw/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಅಪಘಾತಕ್ಕೆ ಬಿಎಂಟಿಸಿ ಬಸ್ ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಬಸ್‌ನ ಚಾಲಕನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.