ಏರೋಸ್ಪೇಸ್ ಎಂಜಿನಿಯರ್ ಸಾ ವಿನ ಟ್ವಿಸ್ಟ್, ಎರಡು ಮಕ್ಕಳ ಆಂಕಲ್ ಹಿಂದೆ ತಿದ್ದಿದ್ದೆ ತಪ್ಪಾಯ್ತು

 | 
ಕ್
ಧರ್ಮಸ್ಥಳ ಮೂಲದ ಯುವತಿ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಆಕಾಂಕ್ಷ ಎಸ್ ನಾಯರ್ 22 ವರ್ಷದ ಆಕಾಂಕ್ಷ ಎಸ್ ನಾಯರ್ ಏರೋಸ್ಪೇಸ್ ಉದ್ಯೋಗಿಯಾಗಿದ್ದರು. ಧರ್ಮಸ್ಥಳ ಬಳಿಯ ಬೊಳಿಯಾರ್ ಗ್ರಾಮದ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ. 
ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು.ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದುಕೊಂಡಿದ್ದರು. ಎಲ್.ಪಿ.ಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ಆಕಾಂಕ್ಷ ಪಂಜಾಬ್​ಗೆ ತೆರಳಿದ್ದರು. ಅಲ್ಲಿ ಉಳಿದುಕೊಂಡಿದ್ದ ಕೊಠಡಿಯ 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಪಂಜಾಬ್​ನ ಜಲಂದರ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಯುವತಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು, ಪಂಜಾಬ್​ನ ಜಲಂದರ್ ಪೋಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್‌ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಮನೆಯವರಿಗೆ ಕರೆ ಮಾಡಿದ್ದ ಆಕಾಂಕ್ಷ, ನಾನು ಮಿತ್ರನೊಬ್ಬನ ಜೊತೆ ಕಾಲೇಜಿಗೆ ತೆರಳುತ್ತಿದ್ದೇನೆ. ಅವನೇ ನನ್ನನ್ನು ಬೈಕಿನಲ್ಲಿ ಬಿಟ್ಟುಬಂದಿದ್ದಾರೆ ಎಂದು ತಿಳಿಸಿದ್ದಳು. ಕಾಲೇಜು ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿಯೂ ಕಾಲ್ ನಲ್ಲಿ ಕೊನೆಯದಾಗಿ ಮಾತನಾಡಿದ್ದರೆಂದು ತಿಳಿದು ಬಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub