ಅಪ್ಪು ತರ ಡ್ಯಾನ್ಸರ್ ಆಗಬೇಕಿದ್ದ ಅಣ್ಣಾವ್ರ ಮೊಮ್ಮಗನ ಕಾಲು ಕಟ್, ಇಡೀ ದೊಡ್ಮನೆ ಕಣ್ಣೀರಿನಲ್ಲಿ

 | 
ರಿ

 ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗ ನಟ ಸೂರಜ್​ಗೆ ಭೀಕರವಾದ ಅಪಘಾತದಲ್ಲಿ ​ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಸೂರಜ್​ ಅವರು ಬೈಕ್​ನಲ್ಲಿ ಊಟಿಗೆ ತೆರಳುತ್ತಿದ್ದರು. ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್​​ಗೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್​ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ.


ಗಾಂಧಿನಗರಕ್ಕೆ ಎಂಟ್ರಿ ನೀಡಬೇಕು ಎಂದು ಸೂರಜ್​ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸೇರಿದಂತೆ ಒಂದೆರಡು ಸಿನಿಮಾಗಳನ್ನು ಅವರು ಅನೌನ್ಸ್​ ಮಾಡಿದ್ದರು. ಅಷ್ಟರಲ್ಲಾಗಲೇ ಅವರಿಗೆ ಈ ದುಸ್ಥಿತಿ ಎದುರಾಗಿದೆ.


ಕನ್ನಡ ಚಿತ್ರರಂಗದಲ್ಲಿ ನಟನಾಗಬೇಕು ಎಂದು ಸೂರಜ್​ ಕನಸು ಕಂಡಿದ್ದರು. ಕೆಲವು ಚಿತ್ರಗಳ ಶೂಟಿಂಗ್​ನಲ್ಲೂ ಪಾಲ್ಗೊಂಡಿದ್ದರು. ಆದರೆ ಈಗ ಅವರು ಕಾಲು ಕಳೆದುಕೊಂಡು ಸಂಕಟಪಡುವಂತಾಗಿರುವುದು ನೋವಿನ ಸಂಗತಿ.


ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಘವಿಸಿದೆ. ಸದ್ಯ ಸೂರಜ್​ ಅವರು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಚಿತ್ರರಂಗದ ಅನೇಕರು ಭೇಟಿ ನೀಡಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ಸೂರಜ್​ ಐಸಿಯುನಲ್ಲೇ ಇರಬೇಕಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​ ಸೇರಿದಂತೆ ಡಾ. ರಾಜ್​ ಕುಟುಂಬದ ಹಲವರು ಆಸ್ಪತ್ರೆಗೆ ಬಂದು ಸಮಾಧಾನ ಹೇಳಿದ್ದಾರೆ.


ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.