'ಕರಿಮಣಿ ಮಾಲೀಕ' ಹಾಡಿಗೆ ಸ್ಟೆಪ್ ಹಾಕಿದ ಅರ್ಜುನ್ ಜನ್ಯ ಹಾಗೂ ಅನುಶ್ರೀ; ಜನ್ಯ ಪತ್ನಿ ಗರಂ

ಕರಿಮಣಿ ಮಾಲೀಕ ನೀನಲ್ಲ ಹಾಡು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿದೆ. ಹೀಗಿರುವಾಗಲೇ ಸದಾ ಮದುವೆ ವಿಚಾರಕ್ಕೆ ಸುದ್ದಿಯಾಗುವ ನಿರೂಪಕಿ ಅನುಶ್ರೀ, ಇದೇ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಯಾರು ನಿಮ್ಮ ಕರಿಮಣಿ ಮಾಲೀಕ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.
ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್ವುಡ್ ನಟಿ ಅನುಶ್ರೀ ಮನೆಮಾತಾಗಿರುವ ನಟಿ. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುವ ಅನುಶ್ರೀ ಸದ್ಯ ಸರಿಗಮಪ ಸಂಗೀತದ ರಿಯಾಲಿಟಿ ಷೋನಲ್ಲಿ ಬಿಜಿಯಾಗಿದ್ದಾರೆ. ತಮ್ಮ ಚಟಪಟ ಮಾತಿನಿಂದಾಗಿ ಅನುಶ್ರೀ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ.
ಅವರು ಟಿವಿ ಶೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2023ರಲ್ಲಿ ಅನುಶ್ರೀ ಅವರಿಗೆ ಹಲವಾರು ಪ್ರಶಸ್ತಿಗಳೂ ಸಂದಿವೆ.
ಮೇಡಮ್, ನಮ್ ಮನ್ಸು ಒಳ್ಳೇದ್ ಮಾಡಿದ್ರೆ ದೇವ್ರು... ಅಷ್ಟೇ ಸಾಕು ಏನಂತೀರಾ!!!..... ತಾಯಿಗೆ ಕೈ ಮುಗ್ಸಿ ಅಷ್ಟೇ... ಕರಿಮಣಿ ಮಾಲಿಕ ಎಲ್ಲಾ ಯಾಕೇ? ಏನಂತೀರಾ?? ಎಂದರೆ, ಇನ್ನು ಕೆಲವರು, ಕರಿಮಣಿ ಮಾಲೀಕ ಯಾರು ಅಂತರ ಹೇಳ್ರಿ ಅನುಶ್ರೀ ಅವರೇ ಮದುವೆ ಸೀಸನ್ ಐತಿ ನಿಮ್ದು ಮದುವೆ ಮಾಡೋಣ, ಇದು ಮಿಲಿಯನ್ ಡಾಲರ್ ಪ್ರಶ್ನೆ ಎಂದು ಕಾಮೆಂಟ್ ಹಾಕುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.