ಮುದ್ದಿನ ಮಡದಿಯ ಬರ್ತಡೆ ಆಚರಿಸಿದ ದರ್ಶನ್, ಅಪ್ಪ ಬದಲಾಗಿದ್ದಾರೆ ಎಂದ ಮಗ ವಿನೀಶ್
Feb 6, 2025, 09:12 IST
|

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ ಹಲವು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕೊಲೆ ಕೇಸ್ ಆರೋಪಿಯಾಗಿರುವ ನಟ ದರ್ಶನ್ ಬಿಡುಗಡೆ ಬಳಿಕ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪೋಸ್ಟ್ ಹಾಕಿಕೊಂಡಿದ್ದಾರೆ. ಕಳೆದ ನವೆಂಬರ್ 11 ರಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಜನ್ಮದಿನವಿತ್ತು. ಆದರೆ, ನಟ ದರ್ಶನ್ ಜೈಲಿನಲ್ಲಿದ್ದ ಕಾರಣ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.
ಇದೀಗ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ, ರೆಡ್ ಡ್ರೆಸ್ನಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ವಿಭಿನ್ನ ಫೋಟೋಸ್ಗಳನ್ನು ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬದ ಕೇಕ್ ಕತ್ತರಿಸಿ ಖುಷಿಯಿಂದ ಹಲವು ಪೋಟೋಗಳನ್ನ ಪೋಸ್ಟ್ ಮಾಡಿದ್ದಾರೆ. ಇನ್ನೂ ಬರ್ತಡೆ ಕುರಿತು ಹಂಚಿಕೊಂಡಿರುವ ಫೋಟೋಗೆ ತಡವಾಗಿಯಾದರೂ ಈ ಸಂಭ್ರಮ ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾರೆ .
ನೆಟ್ಟಿಗರು ಅತ್ತಿಗೆ, ಹ್ಯಾಪಿ ಬರ್ತ್ಡೇ ಎಂದು ಕಾಮೆಂಟ್ ಮಾಡಿದ್ದಾರೆ.ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್ಸ್ಟಾಗ್ರಾಂ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,18 Jun 2025
ಕರ್ಣ ಸೀರಿಯಲ್ ಟಿವಿಯಲ್ಲಿ ಬರಲ್ವಾ; ಮಹತ್ವದ ಸುಳಿವು ಕೊಟ್ಟ ನಮ್ರತಾ ಗೌಡ
Wed,18 Jun 2025