ಡೆವಿಲ್‌ ಡೈಲಾಗ್ ಹೊಡೆದ ದರ್ಶನ್, ಎದ್ದು ಬಿದ್ದು ‌ಕುಣಿದ ಕೋಟ್ಯಾಂತರ ಜನ

 | 
Jd
ಕೆಟ್ಟ ಘಟನೆ ನಡೆಯುತ್ತದೆ ಮತ್ತೆ ಜನ ಅದನ್ನು ಮರೆತು ಮೊದಲಿನಂತೆ ಆಗುತ್ತಾರೆ. ಹೌದು ನಟ ದರ್ಶನ್ ಮತ್ತೆ ಸಹಜ ಜೀವನಕ್ಕೆ ಮರಳಿದ್ದಾರೆ. ಸಿನಿಮಾ ಚಿತ್ರೀಕರಣದಲ್ಲಿ ಭಾಗವಹಿಸುವುದು ಮಾತ್ರವಲ್ಲ ಆಪ್ತರ ಕಾರ್ಯಕ್ರಮಗಳಲ್ಲಿ ಕೂಡ ಭಾಗಿ ಆಗುತ್ತಿದ್ದಾರೆ. ಆದರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇನ್ನು ಕಾಣಿಸಿಕೊಳ್ಳುತ್ತಿಲ್ಲ. ಸದ್ಯ 'ಡೆವಿಲ್' ಸಿನಿಮಾ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ.
ಮಿಲನಾ ಪ್ರಕಾಶ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ 'ಡೆವಿಲ್'. ಈ ವರ್ಷವೇ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೀತಿದೆ. ಈಗಾಗಲೇ ಟಾಕಿ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳು ಹಾಗೂ ಆಕ್ಷನ್ ಸೀಕ್ವೆನ್ಸ್ ಸೆರೆಹಿಡಿಯಬೇಕಿದೆ. ಹಾಡುಗಳ ಚಿತ್ರೀಕರಣಕ್ಕಾಗಿ ಮುಂದಿನ ತಿಂಗಳು ಚಿತ್ರತಂಡ ವಿದೇಶಕ್ಕೆ ಹಾರಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಇತ್ತೀಚೆಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಕೋರ್ಟ್ ಇಂದ ಅನುಮತಿ ಪಡೆದಿದ್ದಾರೆ.
  ಕಳೆದ ವರ್ಷ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಮಳವಳ್ಳಿ ಸೇರಿ ಸಾಕಷ್ಟು ಕಡೆಗಳಲ್ಲಿ ಸುತ್ತಾಡಿ ಮತ ಯಾಚಿಸಿದ್ದರು. ಈ ವೇಳೆ ಅಭಿಮಾನಿಗಳ ಕೋರಿಕೆ ಮೇರೆಗೆ 'ಡೆವಿಲ್' ಚಿತ್ರದ ಖಡಕ್ ಡೈಲಾಗ್ ಹೇಳಿ ರಂಜಿಸಿದ್ದರು. ಆ ವೀಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಒಂದೂವರೆ ವರ್ಷದ ಹಿಂದೆ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ 'ಡೆವಿಲ್' ಚಿತ್ರದ ಟೀಸರ್ ರಿಲೀಸ್ ಆಗಿ ಸದ್ದು ಮಾಡಿತ್ತು.
 ಅದರಲ್ಲಿದ್ದ ಡೈಲಾಗ್ ಅಭಿಮಾನಿಗಳ ಗಮನ ಸೆಳೆದಿತ್ತು. ಅದೇ ಡೈಲಾಗ್ ಅನ್ನು ದರ್ಶನ್ ಅಂದು ಹೇಳಿದ್ದರು. ನಮ್ಮ ಮನೆಯಲ್ಲೊಂದು ಪುಟ್ಟ ಪಾಪು ಇರುವುದು, ಫೋಟೋ ತೆಗೆಯಲು ಅದಕ್ಕೆ ಬಲು ಕೋಪ ಬರುವುದು, ಫೋಟೋ ತೆಗೆದ ಕೈಯ ಪಾಪು ಮುರಿದು ಬಿಡುವುದು, ಸರಸು.... ಪಾಪು ಹೆಸರು ಕೇಳಿಲ್ವಾ.. ಹಹ್ಹಹ".. ಎನ್ನುವ ಡೈಲಾಗ್ ಸಖತ್ ಟ್ರೆಂಡ್‌ ಹುಟ್ಟಾಕ್ಕಿತ್ತು. ಅದೇ ಡೈಲಾಗ್ ಅನ್ನು ಇದೀಗ ಅಭಿಮಾನಿಗಳು ಮತ್ತೆ ಕೇಳಿ ಎಂಜಾಯ್ ಮಾಡುತ್ತಿದ್ದಾರೆ. ವೀಡಿಯೋ ಹಂಚಿಕೊಳ್ಳುತ್ತಿದ್ದಾರೆ. 
ಡೆವಿಲ್' ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತದೆ ಎನ್ನುತ್ತಿದ್ದಾರೆ. ಶೂಟಿಂಗ್ ವೇಳೆ ಘಟನೆ ರಚನಾ ರೈ 'ಡೆವಿಲ್' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನುಳಿದಂತೆ ಮಹೇಶ್ ಮಂಜ್ರೇಕರ್, ಅಚ್ಯುತ್‌ಕುಮಾರ್ ಸೇರಿ ದೊಡ್ಡ ತಾರಾಗಣವಿದೆ. ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಇನ್ನು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹಾಗಾಗಿ ಆಕ್ಷನ್ ಸನ್ನಿವೇಶಗಳನ್ನು ನಿಧಾನವಾಗಿ ಸೆರೆಹಿಡಿಯಲು ತೀರ್ಮಾನಿಸಲಾಗಿದೆ. 
ಅದನ್ನು ಮುನ್ನ ಡಬ್ಬಿಂಗ್ ಮುಗಿಸಿ ಸಾಂಗ್ಸ್ ಶೂಟ್ ಮಾಡಲು ಮುಂದಾಗಿದೆ. 'ಡೆವಿಲ್' ಸಿನಿಮಾ ತಡವಾಗಿ ದರ್ಶನ್ ಮುಂದೆ ನಟಿಸಬೇಕಿರುವ ಸಿನಿಮಾಗಳು ಮುಂದಕ್ಕೆ ಹೋಗುವಂತಾಗಿದೆ. ಈ ಸಿನಿಮಾ ಬೆನ್ನಲ್ಲೇ ಜೋಗಿ ಪ್ರೇಮ್ ನಿರ್ದೇಶನದ ಚಿತ್ರದಲ್ಲಿ ದರ್ಶನ್ ನಟಿಸಲಿದ್ದಾರೆ. ಕೆವಿಎನ್ ಸಂಸ್ಥೆ ಆ ಚಿತ್ರವನ್ನು ನಿರ್ಮಾಣ ಮಾಡಲಿದೆ. 
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub