FactCheck:ಪವಿತ್ರ ಗೌಡಗೆ ಮತ್ತೆ ಟಕ್ಕರ್ ಕೊಟ್ಟ ವಿಜಯಲಕ್ಷ್ಮಿ, ಇನ್ನುಮುಂದೆ ದರ್ಶನ್ ಬಳಿ ದಾಸನ ಬಳಿ ಸುಬ್ಬಿ ಬರಲ್ಲ

 | 
Hs
ದರ್ಶನ್ ಹಾಗೂ ವಿಜಯಲಕ್ಷ್ಮಿ ಕೌಟುಂಬಿಕ ಜೀವನ ಬದಲಾಗಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ ದಿನದಿಂದ ವಿಜಯಲಕ್ಷ್ಮಿ ಬದುಕು ಕೂಡ ಬದಲಾಗಿದೆ. ಇದು ಮೇಲ್ನೋಟಕ್ಕೆ ಅಷ್ಟೇ ಅಲ್ಲ ಅನ್ನೋದು ಈಗೀಗ ಎಲ್ಲರಿಗೂ ಗೊತ್ತಾಗುತ್ತಿದೆ. ದರ್ಶನ್‌ಗೆ ಜಾಮೀನು ಸಿಗುವುದಕ್ಕೆ ಪತ್ನಿ ವಿಜಯಲಕ್ಷ್ಮಿಯ ಪಾತ್ರ ದೊಡ್ಡದಿತ್ತು. ಜಾಮೀನಿಗಾಗಿ ನಿರಂತರ ಹೋರಾಟ ಮಾಡಿದ್ದರು.
ದರ್ಶನ್ ಜಾಮೀನಾಗಿ ಹೋರಾಟ ಮಾಡಿದ್ದು ಒಂದು ಹಂತ. ಆದರೆ, ಜಾಮೀನಿನ ಮೇಲೆ ಹೊರ ಬಂದ್ಮೇಲೆ ದರ್ಶನ್ ಬೆನ್ನ ಹಿಂದೆ ನಿಂತು ಎಲ್ಲವನ್ನೂ ನಿಭಾಯಿಸುತ್ತಿರುವುದು ವಿಜಯಲಕ್ಷ್ಮಿ ಅವರೇ. ಈಗ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಇಬ್ಬರೂ ಹಲವು ಇವೆಂಟ್‌ಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪತಿಯೊಂದಿಗೆ ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಇದರ ಬೆನ್ನಲ್ಲೆ ಈಗ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ದರ್ಶನ್ ಜೊತೆಗಿನ ಫೋಟೊ ಒಂದನ್ನು ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಂತೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದರ್ಶನ್ ಅಭಿಮಾನಿಗಳು ಅಣ್ಣ-ಅತ್ತಿಗೆ ಅಂತ ಫೋಟೋಗಳನ್ನು ಶೇರ್ ಮಾಡುವುದಕ್ಕೆ ಶುರು ಮಾಡಿದ್ದಾರೆ. ಅಷ್ಟಕ್ಕೂ ವಿಜಯಲಕ್ಷ್ಮಿ ದರ್ಶನ್ ಈ ಫೋಟೋವನ್ನು ಹಂಚಿಕೊಂಡಿದ್ದು ತನಗೆ ಕಾಣಲಿ ಎಂದೇ ಎಂದು ಪವಿತ್ರಾ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ವಿಜಯಲಕ್ಷ್ಮಿ ಪತಿಯೊಂದಿಗಿನ ಫೋಟೋಗಳನ್ನು ಹಂಚಿಕೊಳ್ಳುವುದು ಹೊಸ ವಿಷಯವೇನಲ್ಲ. ಕೆಲವು ವಿಶೇಷ ದಿನಗಳ ನೆನಪಿಗಾಗಿಯೋ, ಇಲ್ಲ ಹುಟ್ಟುಹಬ್ಬದಂತಹ ವಿಶೇಷ ದಿನದಂದು ಫೋಟೋಗಳನ್ನು ಹಂಚಿಕೊಂಡಿದ್ದು ಇದೆ. ಇಂದು ವಿಜಯಲಕ್ಷ್ಮಿ ದರ್ಶನ್ ಪತಿಯೊಂದಿಗಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮಿ ಕುದುರೆಯನ್ನು ಹಿಡಿದು ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub