FactCheck:ಗುರೂಜಿ ಜೊತೆ ನನ್ನ ವಿಡಿಯೋ ಇದೆ, ಅಸಲಿಯತ್ತು ಹಂಚಿಕೊಂಡ ದಿವ್ಯಾ ವಸಂತ

 | 
ಸತದ
ರಾಜ್ಯದಲ್ಲಿ ಹಣಕ್ಕಾಗಿ ಬ್ಲ್ಯಾಕ್​ಮೇಲ್ ಹಾಗೂ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಇದೀಗ ಪ್ರಖ್ಯಾತ ಆನಂದ ಗುರೂಜಿ ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ ಗುರೂಜಿ ದೂರು ದಾಖಲಿಸಿದ್ದಾರೆ. ಈ ದೂರಿನ ಸಂಬಂಧ ಪೊಲೀಸರು ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೋರ್ಟ್​ನಿಂದ ತಡೆಯಾಜ್ಞೆ ತಂದರೂ ನಿಮ್ಮ ಸೆ... ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ದುಷ್ಕರ್ಮಿಗಳು ತಮ್ಮ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.
ಈ ಹಿಂದೆ ಹನಿಟ್ರ್ಯಾಪ್​ ಪ್ರಕರಣದಲ್ಲಿ ದಿವ್ಯಾ ವಸಂತ ಬಂಧನವಾಗಿದ್ದಳು. ಇಂದಿರಾ ನಗರದ ಬ್ಯೂಟಿ ಪಾರ್ಲರ್ ನಲ್ಲಿ ಸ್ಟಿಂಗ್​​ ಆಪರೇಷನ್​ ನಡೆಸಿ ಬಳಿಕ ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡಿದ್ದಳು. ಈ ಸಂಬಂಧ ಪಾರ್ಲರ್​ ಮಾಲೀಕರು ನೀಡಿದ್ದ ಹನಿಟ್ರ್ಯಾಪ್ ದೂರಿನ ಮೇರೆಗೆ ದಿವ್ಯಾ ವಸಂತಳನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದರು. ಆದ್ರೆ ಇದೀಗ ಅದರ ಕುರಿತಾಗಿ ಮಾತನಾಡಲು ಲೈವ್ ಬಂದಿದ್ದಾರೆ.
ನಾನು ಯಾವ ತಪ್ಪನ್ನೂ ಮಾಡಿಲ್ಲ. ಯಾಕೇ ಪದೇ ಪದೇ ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ ಗೊತ್ತಿಲ್ಲ. ನನ್ನದಲ್ಲದ ತಪ್ಪಿಗೆ ನನ್ನ ತಂದು ಸಿಕ್ಕಿಸಿದ್ದಾರೆ. ಕಳೆದ 18 ಕ್ಕೇ ಕಂಪ್ಲೇಂಟ್ ಕೊಟ್ಟು ನಾನು ಬೇಲ್ ತೆಗೆದುಕೊಂಡಾಗಿದೆ ಇದೀಗ ಮತ್ತೆ ನನ್ನ ಹೆಸರನ್ನು ಹೇಳಿಕೊಂಡು ಸಂಚು ಮಾಡಲಾಗ್ತಿದೆ. ನಿಜಕ್ಕೂ ಬೇಸರ ಅನಿಸಿದೆ. ಯಾವ್ ಯಾವ್ ಚಾನೆಲ್ ಗೆ ಎಷ್ಟು ಹಣ ನೀಡಿದ್ದಾರೋ ಗೊತ್ತಿಲ್ಲ ಅವರು ಕೂಡ ನನ್ನನ್ನು ಟಾರ್ಗೆಟ್ ಮಾಡಿಕೊಂಡು ಮಾತಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.