FactCheck:ಏಕಾಏಕಿ ದರ್ಶನ್ ನನ್ನು ಭೇಟಿಯಾದ ಪವಿತ್ರ ಗೌಡ, ವೈರಲ್ ಸುದ್ದಿಯ ಅಸಲಿಯತ್ತು

 | 
Huu
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾ ಗೌಡ ಸೇರಿದಂತೆ ಎಲ್ಲ 17 ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57 ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಖುದ್ದು ಎಲ್ಲ ಆರೋಪಿಗಳು ಹಾಜರಾಗಬೇಕೆಂಬ ಸೂಚನೆ ಮೇರೆಗೆ ಕೋರ್ಟ್‌ಗೆ ಬಂದ ನಟ ದರ್ಶನ್ ಮತ್ತು ಪವಿತ್ರಾ ಗೌಡ. ಕಟಕಟೆಯಲ್ಲಿ ಖುದ್ದು ದರ್ಶನ್ ಮತ್ತು ಪವಿತ್ರಾ ಗೌಡರನ್ನು ನ್ಯಾಯಾಧೀಶರು ಪ್ರಕರಣ ಸಂಬಂಧ ಪ್ರಶ್ನಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರು ಮೇಲಿನ ಕೊಲೆ, ಕಿಡ್ನಾಪ್, ಹಲ್ಲೆ ಸೇರಿದಂತೆ ಎಲ್ಲ ಆರೋಪಿಗಳನ್ನು ನ್ಯಾಯಾಧೀಶರು ಕೇಳಲಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನ್ಯಾಯಾಲಯಕ್ಕೆ ಬಂದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರು ಬರೋಬ್ಬರಿ 06 ತಿಂಗಳ ಬಳಿಕ ಮುಖಾ ಮುಖಿ ಆಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್‌ ನಲ್ಲಿ ಉಲ್ಲೇಖಿಸಿರುವ ಸೆಕ್ಸನ್‌ ಗಳಡಿ ದಾಖಲಾದ ಆರೋಪಗಳ ಬಗ್ಗೆ ಖದ್ದು ವಿಚಾರಣೆ ನಡೆಸಲಾಗುತ್ತಿದೆ. ಕೋರ್ಟ್‌ಗೆ ಇಂದು ಎಲ್ಲ ಆರೋಪಿಗಳನ್ನು ಕಟಕಟೆಯಲ್ಲಿ ನಿಲ್ಲಿಸಲಾಗುತ್ತದೆ.ಚಾರ್ಜ್ ಶೀಟ್ ನಲ್ಲಿ ಹಾಕಲಾದ ಸೆಕ್ಷನ್ ಗಳಡಿ ಆರೋಪಗಳ ಬಗ್ಗೆ ನ್ಯಾಯಾಧೀಶರು ಪ್ರಶ್ನೆ ಮಾಡಲಿದ್ದಾರೆ. ಈ ವೇಳೆ ಖುದ್ದು ಆರೋಪಿಗಳು ತಮ್ಮ ಮೇಲಿನ ಆರೋಪ ಕುರಿತು ಉತ್ತರಿಸುತ್ತಾರೆ
ನಟ ದರ್ಶನ್ ಮೇಲೆ ಅಪಾರ ಪ್ರೀತಿ ಹೊಂದಿರುವ ನಟಿ ಪವಿತ್ರಾ ಗೌಡ ಇತ್ತೀಚೆಗೆ ಬೇಲ್ ಮೇಲೆ ಹೊರ ಬರುತ್ತಿದ್ದಂತೆ ದರ್ಶನ್ ಹೆಸರಿನಲ್ಲಿ ಪೂಜೆ ನೆರವೇರಿಸಿದ್ದಾರೆ. ಕಳೆದ ಆರೇಳು ತಿಂಗಳೂ ಇಬ್ಬರು ಪ್ರತ್ಯೇಕ ಜೈಲಿನಲ್ಲಿಯೇ ಕಳೆದಿದ್ದಾರೆ. ಪೊಲೀಸ್ ವಿಚಾರಣೆ ಬಳಿಕ ಇಬ್ಬರು ಮುಖಾ ಮುಖಿ ಆಗಿರಲಿಲ್ಲ. ಇದೀಗ ತಿಂಗಳುಗಳ ಬಳಿಕ ಕೋರ್ಟ್‌ನಲ್ಲಿ ದರ್ಶನ್‌ ರನ್ನು ನೋಡುತ್ತಿದ್ದಂತೆ ನಟಿ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ. ಕೆಲವು ಕ್ಷಣಗಳ ಕಾಲ ಭಾವುಕರಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub