ಮೊಟ್ಟಮೊದಲ ಬಾರಿಗೆ ಪತ್ನಿ ಜೊತೆ ತಿರುಗಾಡಲು ಪಕ್ಕದ ರಾಜ್ಯಕ್ಕೆ ಹೊರಟ ದರ್ಶನ್
Mar 24, 2025, 19:57 IST
|

ಈ ದೇವಾಲಯಕ್ಕೆ ನಟ ದರ್ಶನ್ ಕುಟುಂಬ ಸಮೇತ ತೆರಳಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿ ದೇವರ ದರ್ಶನ ಪಡೆದಿದ್ದಾರೆ.ಕೇರಳದ ಈ ಪ್ರಸಿದ್ಧ ದೇವಸ್ಥಾನದಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಕಾಣಿಸಿಕೊಂಡಿರೋದು ಅಚ್ಚರಿಗೆ ಕಾರಣವಾಗಿದೆ. ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಈ ದೇವಸ್ಥಾನಲ್ಲಿ ದರ್ಶನ್ ಕುಟುಂಬ ಕಾಣಿಸಿಕೊಂಡಿದ್ದು ಈ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಜೈಲಿನಲ್ಲಿದ್ದಾಗ, ಜಾಮೀನಿನ ಮೇಲೆ ಹೊರಗಡೆ ಬಂದ ಮೇಲೆ ಹಲವು ದೇವಾಲಯಕ್ಕೆ ಭೇಟಿ ನೀಡಿದ್ದರು. ಇದೀಗ ಕೇರಳದ ಕಣ್ಣೂರಿನ ಮಾಡಾಯಿಕಾವು ದೇವಸ್ಥಾನದಲ್ಲಿ ಪತ್ನಿ ವಿಜಯಲಕ್ಷ್ಮಿ, ಮಗ ಹಾಗೂ ನಟ ಧನ್ವೀರ್ ಜೊತೆ ವಿಜಯಲಕ್ಷ್ಮಿ ಅವರು ಆಗಮಿಸಿದ್ದಾರೆ. ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಈ ದೇವಸ್ಥಾನಲ್ಲಿ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಆಪ್ತ ಧನ್ವೀರ್ ಜೊತೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡಲು ನಕ್ಷತ್ರ, ಗಳಿಗೆ, ಸೂಕ್ತ ಸಮಯ ನೋಡಿಕೊಂಡು ಪೂಜೆ ಮಾಡಲಾಗುತ್ತೆ. ಇವತ್ತು ಶುಭವಾದ ಸಮಯವಾಗಿದ್ದು, ಪ್ರಾರ್ಥನೆ ಮಾಡಿದ್ರೆ ಫಲ ಸಿಗುತ್ತೆ ಅನ್ನೋ ನಂಬಿಕೆ ಇದೆ.ಹಿಂದೂ ಪಂಚಾಂಗದ ಪ್ರಕಾರ ಅಷ್ಟಮಿ ತಿಥಿಯಾದ ಇಂದು ಶತ್ರು ಸಂಹಾರ ಪೂಜೆ ಸಲ್ಲಿಸಿದ್ರೆ ವಿಶೇಷ ಫಲ, ಪರಿಹಾರ ಸಿಗುತ್ತೆ ಅನ್ನೋ ನಂಬಿಕೆ ಇದೆ. ಇವತ್ತು ಶನಿವಾರ ಮತ್ತು ಅಷ್ಟಮಿ ತಿಥಿ ಇರುವ ಹಿನ್ನೆಲೆಯಲ್ಲಿ ಜ್ಯೋತಿಷಿಗಳ ಸಲಹೆ ಮೇರೆಗೆ ಶತ್ರು ಸಂಹಾರ ಪೂಜೆ ನೆರವೇರಿದೆ ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,5 Jun 2025