ಮೊಟ್ಟಮೊದಲ ಬಾರಿಗೆ ಹಿಂದೂಗಳ ಕುಂಭವೇಳದ ಬಗ್ಗೆ ಮೆಚ್ಚುಗೆಯ ಮಾತನಾಡಿದ ಪ್ರಕಾಶ್ ರಾಜ್
Feb 2, 2025, 10:00 IST
|

ನಟ ಪ್ರಕಾಶ್ರಾಜ್ ಅವರು ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ಹಂಚಿಕೊಂಡ ಮೇಲೆ ಅವರ ಮೇಲೆ ಹಿಂದೂಗಳು ಮುಗಿಬಿದಿದ್ದರು. ಇದರ ಬೆನ್ನಲ್ಲೇ ಮಹಾ ಕುಂಭಮೇಳ 2025ರಲ್ಲಿ ನಟ ಪ್ರಕಾಶ್ ರಾಜ್ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿತ್ತು. ಇದನ್ನು ಕೃತಕ ಬುದ್ಧಿಮತ್ತೆ ಟೂಲ್ ಮೂಲಕ ರಚಿಸಲಾಗಿದೆ.
ಇದರ ಬೆನ್ನಲ್ಲೇ ಪ್ರಕಾಶ್ ರಾಜ್ ಅವರು ದೂರು ದಾಖಲು ಮಾಡಿದ್ದಾರೆ. ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಅವರ AI ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಈ ಫೋಟೋ ಭಾರೀ ವೈರಲ್ ಆಗಿತ್ತು.ನಟ ಪ್ರಕಾಶ್ ರಾಜ್ ಅವರು ಇದೀಗ ಮತ್ತೊಂದು ವಿಷಯದಿಂದ ಸುದ್ದಿಯಲ್ಲಿ ಇದ್ದಾರೆ.
ಪ್ರಕಾಶ್ ರಾಜ್ ಅವರು ರಾಜಕೀಯ ಹಾಗೂ ಹಿಂದೂ ಧರ್ಮದ ಕೆಲವೊಂದು ವಿಚಾರಗಳ ವಿಮರ್ಶೆ, ಚರ್ಚೆ ಮಾಡುವುದು ಇದೆ. ಆದರೆ ಅದರಿಂದ ಅವರು ಟ್ರೋಲ್ಗೆ ಗುರಿಯಾಗಿದ್ದೇ ಹೆಚ್ಚು. ಈಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಮಹಾಕುಂಭ ಮೇಳಕ್ಕೆ ಸಂಬಂಧಿಸಿದಂತೆ ಅವರು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು.
ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ್ದ ಮಹಿಳೆಯೊಬ್ಬರು ಅಲ್ಲಿ ಜನ ಸ್ವಚ್ಛತೆ ಕಾಪಾಡಿಕೊಳ್ಳುತ್ತಿಲ್ಲ. ಜನ ಇಲ್ಲಿ ಹೊಲಸು ಮಾಡುತ್ತಿದ್ದಾರೆ ಎಂದು ದೂರಿದ್ದರು. ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದ ಪ್ರಕಾಶ್ ರಾಜ್ ಇದು ಅಸಹ್ಯಕರವಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಇದರ ಬೆನ್ನಲ್ಲೇ ಅವರು ಪ್ರಕಾಶ್ ರಾಜ್ ಅವರು ಸಹ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುತ್ತಿರುವಂತಹ ಫೋಟೋ ವೈರಲ್ ಮಾಡಲಾಗಿತ್ತು.ಈ ಫೋಟೋ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಕಾಶ್ರಾಜ್ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.