ದ ರ್ಶನ್ ಫೋಟೋಗೆ ಹಿಂದೂ ಅರ್ಚಕರಿಂದ ಪೂಜೆ; ತಕ್ಷಣ ಅಮಾನತು ಮಾಡಿದ ದೇವಾಲಯದ ಸಂಸ್ಥೆ
Aug 8, 2024, 10:18 IST
|

ಜೊತೆಗೆ ದರ್ಶನ್ ಜೈಲಿನಿಂದ ಹೊರಬರಲಿ ಎಂದು ಅಭಿಮಾನಿಗಳು ದೇವರಿಗೆ ಜಪ-ತಪ, ವ್ರತ ಸೇರಿದಂತೆ ವಿಶೇಷ ಪೂಜೆಗಳನ್ನು ಮಾಡುತ್ತಿದ್ದಾರೆ. ಇದೇ ರೀತಿ ಶ್ರಾವಣ ಸೋಮವಾರ ವಿವಿಧೆಡೆ ದರ್ಶನ್ ಬಿಡುಗಡೆಗಾಗಿ ಪೂಜೆಗಳನ್ನು ಮಾಡಲಾಗಿದೆ. ಈ ಪೈಕಿ ಬಳ್ಳಾರಿಯಲ್ಲಿ ದೇವರ ವಿಗ್ರಹದ ಬಳಿ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು, ಇದೀಗ ಈ ಪೂಜೆ ಅರ್ಚಕರಿಗೆ ಸಂಕಷ್ಟ ತಂದಿಟ್ಟಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದೊಡ್ಡಬಸವೇಶ್ವರ ದೇವರ ಪ್ರಾಣ ಮೂರ್ತಿ ಮುಂದೆ ಅರ್ಚಕರು ನಟ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಡೆವಿಲ್ ಎಂದು ಬರೆದಿರುವ ಪೋಸ್ಟರ್ ಸೇರಿದಂತೆ ದರ್ಶನ್ ವಿವಿಧ ಫೋಟೋಗಳನ್ನು ದೇವರ ಮುಂದೆ ಇಡಲಾಗಿದೆ. ದರ್ಶನ್ ಫೋಟೋದ ಬಳಿಯೂ ಕುಂಕುಮ ಹೂ ಇಟ್ಟು ಪೂಜೆ ಮಾಡಿ ಮಂಗಳಾರತಿ ಎತ್ತಲಾಗಿದೆ.
ಕುರುಗೋಡು ತಾಲೂಕಿನ ದೊಡ್ಡಬಸವೇಶ್ವರ ಅರ್ಚಕ ಮಲ್ಲಿ ಎನ್ನುವವರು ದೇವಸ್ಥಾನದ ಸಂಪ್ರದಾಯಕ್ಕೆ ಧಕ್ಕೆತಂದಿದ್ದಾರೆ. ಅಲ್ಲದೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕರನ್ನು ಅಮಾನತು ಮಾಡಿದ್ದು, ವಿಚಾರಣೆ ಮುಗಿಯುವವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ ಎನ್ನಲಾಗಿದೆ.
ದರ್ಶನ್ ಅಭಿಮಾನಿಗಳು ರಾಜ್ಯದ ಎಲ್ಲೆಡೆ ಪೂಜೆ ಮಾಡಿಸುತ್ತಿದ್ದು, ಈ ಘಟನೆಯಿಂದ ಅಭಿಮಾನಿಗಳು ತಂದು ಕೊಡುವ ಫೋಟೋ ಇಟ್ಟು ಪೂಜೆ ಮಾಡುವ ಅರ್ಚಕರು ಎಚ್ಚೆತ್ತುಕೊಳ್ಳಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025