ಗಂಡ ಕೈಕೊ ಟ್ಟ ಬಳಿಕ ಜಾಹ್ನವಿ ಜೀವನ ಐಷಾರಾಮಿಯತ್ತ ಸಾಗುತ್ತಿದೆ
Aug 5, 2024, 10:36 IST
|

ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ನಟ ಮತ್ತು ಕನ್ನಡ ಬಿಗ್ ಬಾಸ್ನ ವಿಜೇತ ರೂಪೇಶ್ ಶೆಟ್ಟಿ ಅಭಿನಯದ 'ಅಧಿಪತ್ರ' ಸಿನಿಮಾದಲ್ಲಿ ಜಾಹ್ನವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಯನ್ ಶೆಟ್ಟಿ ನಿರ್ದೇಶನದ ಮತ್ತು KAAR ಸಿನಿಕಾಂಬೈ ಪ್ರೊಡಕ್ಷನ್ಸ್ನ ಬೆಂಬಲದೊಂದಿಗೆ, ಅಧಿಪತ್ರ ಸಿನಿಮಾವನ್ನು ಸಸ್ಪೆನ್ಸ್ ಥ್ರಿಲ್ಲರ್ ಎಂದು ಹೇಳಲಾಗಿದೆ. ಚಿತ್ರ ಇದೇ 24ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಬರಲು ಸಜ್ಜಾಗಿದೆ. ಈ ಮೂಲಕ, ಸುದ್ದಿ ಮನೆಯಲ್ಲಿ ಸದ್ದು ಮಾಡಿದ್ದ ಜಾಹ್ನವಿ ಅವರು ಚಂದನದಲ್ಲಿ ಮಿಂಚಲು ಹೊರಟಿದ್ದಾರೆ.
ಈ ಸಂದರ್ಭದಲ್ಲಿ, ಅವರು ಯೂಟ್ಯೂಬ್ ಚಾನೆಲ್ಗೆ ಮಾತನಾಡಿದ್ದು ಹಲವಾರು ವಿಷಯಗಳನ್ನು ಶೇರ್ ಮಾಡಿಕೊಂಡಿದ್ದಾರೆ. ನ್ಯೂಸ್ ರೂಮ್ನಿಂದ ಹೊರಬಂದ ಮೇಲೆ ತಮಗೆ ಸಿಕ್ಕಿರುವ ಅವಕಾಶಗಳ ಕುರಿತು ಹೇಳಿಕೊಂಡಿದ್ದಾರೆ. ಇದೇ ವೇಳೆ ಪಬ್ಲಿಕ್ ಲೈಫ್ನಲ್ಲಿ ಕಾಣಿಸಿಕೊಂಡ ಮೇಲೆ ಜನರು ಟ್ರೋಲ್ ಮಾಡುವ ಬಗ್ಗೆ ಅಸಮಾಧಾನವನ್ನೂ ಹೊರ ಹಾಕಿದ್ದಾರೆ. ಮೊದ ಮೊದಲು ಈ ಟ್ರೋಲ್ಗಳನ್ನು ನೋಡಿ ತುಂಬಾ ಬೇಸರ ಆಗುತ್ತಿತ್ತು.
ಸೋಷಿಯಲ್ ಮೀಡಿಯಾಗಳಲ್ಲಿ ಮನಸ್ಸಿಗೆ ಬಂದದ್ದನ್ನು ಬರೆಯುತ್ತಾರೆ. ಇವರಿಗೆ ಮನುಷ್ಯತ್ವವೇ ಇಲ್ವಾ, ಇವರೇನು ಮನುಷ್ಯರಾ? ಮನೆಯಲ್ಲಿ ಯಾರೂ ಹೆಣ್ಣು ಮಕ್ಳು ಇಲ್ವಾ ಎಂದೆಲ್ಲಾ ಎನ್ನಿಸುತ್ತಿತ್ತು. ಹೆಣ್ಣು ಮಕ್ಕಳನ್ನುಇಷ್ಟು ಕೀಳಾಗಿ ಏಕೆ ನೋಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಅಂದಹಾಗೆ ಜಾಹ್ನವಿ ಅವರು ಸಿಂಗಲ್ ಪೇರೆಂಟ್. ಇವರಿಗೆ ಮಗ ಇದ್ದು, ತಮ್ಮಿಬ್ಬರ ಬಾಂಡಿಂಗ್ ಕುರಿತು ಸಂದರ್ಶನದಲ್ಲಿ ಮಾತನಾಡಿದ್ದಾರೆ. ಅವನು ಮಗನಿಗಿಂತಲೂ ಹೆಚ್ಚಾಗಿ ನನಗೆ ಫ್ರೆಂಡ್ ಇದ್ದ ಹಾಗೆ. ನನಗೆ ಮಗ ಇದ್ದಾನೆ ಎಂದರೆ ಯಾರೂ ನಂಬುವುದಿಲ್ಲ. ಸಂತೂರ್ ಮಮ್ಮಿ ಎನ್ನುತ್ತಾರೆ.
ಆದರೂ ಮಗ ಇರುವುದಂತೂ ನಿಜ. ನನ್ನನ್ನು ತಿದ್ದಿ ತೀಡುವುದೂ ಅವನೇ. ಏನಾದರೂ ಚೆನ್ನಾಗಿಲ್ಲ ಎಂದರೆ ನೇರವಾಗಿಯೇ ಹೇಳಿಬಿಡುತ್ತಾನೆ. ನಾವಿಬ್ಬರೂ ಸ್ನೇಹಿತರಂತೆ ಇದ್ದೇವೆ ಎಂದಿದ್ದಾರೆ. ಸಿಂಗಲ್ ಪೇರೆಂಟ್ ಆಗಿರುವ ಕುರಿತಂತೆ ಮಾತನಾಡಿದ ಜಾಹ್ನವಿ ಅವರು, ಒಂದು ಕಳೆದುಕೊಂಡರೆ ಮತ್ತೊಂದು ರೆಡಿಯಾಗಿರುತ್ತದೆ.
ಆ ದೇವರು ಮಾಡುವ ಪ್ರತಿಯೊಂದು ಕಾರ್ಯದಲ್ಲಿಯೂ ಏನೋ ಒಂದು ಒಳ್ಳೆಯದ್ದು ಇದ್ದೇ ಇರುತ್ತದೆ. ಆ ಕ್ಷಣದಲ್ಲಿ ನಮಗೆ ಅದು ನೋವು ಅನ್ನಿಸಬಹುದು. ಆದರೆ ಎಷ್ಟೋ ವರ್ಷಗಳ ಹಿಂದೆ ಮಾಡಿದ ಕಾರ್ಯ ಒಳ್ಳೆಯದ್ದಕ್ಕೇ ಆಗಿರುತ್ತದೆ. ಆ ದೇವರೇ ಏನಾದರೂ ಪ್ಲ್ಯಾನ್ ಮಾಡಿರುತ್ತಾನೆ. ನನ್ನ ವಿಷಯದಲ್ಲಿಯೂ ಹಾಗೆಯೇ ಆಗಿದೆ. ಮಗ ತುಂಬಾ ಬುದ್ಧಿವಂತ. ನನಗೆ ಆ ಬಗ್ಗೆ ಹೆಮ್ಮೆ ಇದೆ ಎಂದಿದ್ದಾರೆ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,18 Jul 2025