ಮಂಗಳೂರಿನ ಬಾಳೆಲೆ ಊಟ ಮಾಡಿದ ಜ್ಯೂನಿಯರ್ NTR
Sep 10, 2024, 17:06 IST
|

ಇದೀಗ ಹೊಸದಾಗಿ ಶೇರ್ ಆಗಿರುವ ಫೋಟೋಗಳೂ ಸಹ ಸಾಮಾಜಿಕ ಜಾಲತಾಣದಲ್ಲಿ ಜಾಗ ಗಿಟ್ಟಿಸಿಕೊಂಡಿವೆ. ತೆಲುಗು ಚಿತ್ರರಂಗದ ಹೆಸರಾಂತ ಜೂನಿಯರ್ ಎನ್ಟಿಆರ್ ಅವರು ಇತ್ತೀಚೆಗಷ್ಟೇ ಕುಂದಾಪುರದಲ್ಲಿರುವ ತಮ್ಮ ತಾಯಿಯ ತವರು ಮನೆಗೆ ಭೇಟಿ ಕೊಟ್ಟಿದ್ದರು. ಆ ಒಂದೆಡರಡು ದಿನಗಳಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದಾರೆ. ಆರ್ಆರ್ಆರ್ ಸ್ಟಾರ್ನ ಕುಟುಂಬಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಕೆಜಿಎಫ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಕುಟುಂಬ ಸಾಥ್ ನೀಡಿತ್ತು.
ರಿಷಬ್ ಬೆಸ್ಟ್ ಫ್ರೆಂಡ್ ಪ್ರಮೋದ್ ಶೆಟ್ಟಿ ಸಹ ಜೊತೆಗಿದ್ದರು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುವ ಮೂಲಕ ಜನಪ್ರಿಯ ನಟ ಜೂ.ಎನ್ಟಿಆರ್ ಅವರು ತಮ್ಮ ತಾಯಿಯ ಬಹುಕಾಲದ ಕನಸನ್ನು ಈಡೇರಿಸಿದ್ದರು.ಇದೀಗ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಸುತ್ತಾಟದ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಪೋಸ್ಟ್ಗೆ, ಪ್ರೀತಿ ಮತ್ತು ನಗುವಿನಿಂದ ಸುತ್ತುವರೆದ ಸಮಯ. ಈ ಕ್ಷಣಗಳಿಗಾಗಿ ಯಾವಾಗಲೂ ಕೃತಜ್ಞಳಾಗಿರುತ್ತೇನೆ. ಹ್ಯಾಪಿಟೈಮ್ಸ್, ಫ್ರೆಂಡ್ಸ್ ಲೈಕ್ ಫ್ಯಾಮಿಲಿ'' ಎಂದು ಬರೆದುಕೊಂಡಿದ್ದಾರೆ. ಪ್ರಕೃತಿ ಮಡಿಲಲ್ಲಿ ಚಿತ್ರರಂಗದ ಪ್ರತಿಭೆಗಳು ಗುಣಮಟ್ಟದ ಸಮಯ ಕಳೆದಿರೋದನ್ನು ಈ ಫೋಟೋಗಳಲ್ಲಿ ಕಾಣಬಹುದು. ಈ ಫೋಟೋಗಳಿಗೆ ಅಭಿಮಾನಿಗಳು ಪ್ರೀತಿಯ ಧಾರೆಯೆರೆಯುತ್ತಿದ್ದಾರೆ.
ಕಳೆದ ಶನಿವಾರದಂದು ರಿಷಬ್, ಜೂ.ಎನ್ಟಿಆರ್, ಪ್ರಶಾಂತ್ ನೀಲ್ ಕುಟುಂಬ ಉಡುಪಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕೃಷ್ಣಮಠಕ್ಕೆ ಭೇಟಿ ಕೊಟ್ಟಿದ್ದರು. ''ನನ್ನನ್ನು ಕುಂದಾಪುರಕ್ಕೆ ಕರೆತಂದು, ಉಡುಪಿ ಶ್ರೀಕೃಷ್ಣಮಠದಲ್ಲಿ ದೇವರ ದರ್ಶನ ಮಾಡಿಸಬೇಕೆಂಬುದು ನನ್ನ ತಾಯಿಯ ಬಹುಕಾಲದ ಕನಸ್ಸಾಗಿತ್ತು. ಅದೀಗ ನನಸಾಗಿದೆ. ಅವರ ಹುಟ್ಟುಹಬ್ಬಕ್ಕೆ ನಾನು ಕೊಡಬಹುದಾದ ಉತ್ತಮ ಉಡುಗೊರೆಯಿದು. ನನಗೆ ಸಾಥ್ ನೀಡಿರುವ ರಿಷಬ್ ಶೆಟ್ಟಿ ಮತ್ತು ಪ್ರಶಾಂತ್ ನೀಲ್ ಅವರಿಗೆ ಕೃತಘ್ಞತೆ ಎಂದು ತಿಳಿಸಿದ್ದರು.
ಭಾನುವಾರ ಕೊಲ್ಲೂರಿಗೆ ಭೇಟಿ ಕೊಟ್ಟಿದ್ದರು. ಆ ನಂತರ ಮೂಡುಗಲ್ಲು ಕೇಶವನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಶೇಷ ವಿಡಿಯೋ ಹಂಚಿಕೊಂಡು ಗಮನ ಸೆಳೆದಿದ್ದರು. ಇದೀಗ ಪ್ರಕೃತಿ ಮಡಿಲಲ್ಲಿರುವ ಫೋಟೋಗಳು ಸಖತ್ ಸದ್ದು ಮಾಡುತ್ತಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025