ಮಂಗಳೂರು ದಸರಾದಲ್ಲಿ ಸೌಜನ್ಯ ಪರ ಟ್ಯಾಬ್ಲೋ ಅನುಮತಿ ರದ್ದು, ವ್ಯಾಪಕ ಆಕ್ರೋಶ
Oct 26, 2023, 13:22 IST
|

ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ ಬಂದ ಕಾರಣ ಟ್ಯಾಬ್ಲೋವನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಕಂಡು ಬಂತು. ಮಾಹಿತಿ ಪಡೆದ ಸೌಜನ್ಯ ಪರ ಹೋರಾಟ ಸಮಿತಿಯ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಧಾವಿಸಿ ಬಂದು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ನಡೆಸಿದರೂ ಇದಕ್ಕೆ ಒಪ್ಪದ ಪೊಲೀಸ್ ಅಧಿಕಾರಿಗಳು ಟ್ಯಾಬ್ಲೋ ಗೆ ಹೋಗಲು ಅನುಮತಿ ನಿರಾಕರಿಸಿದರು.
ಪೊಲೀಸರ ಈ ನಡವಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೌಜನ್ಯ ಪರ ಹೋರಾಟಗಾರರು ಟ್ಯಾಬ್ಲೋದಲ್ಲಿ ಸೌಜನ್ಯಳ ಭಾವಚಿತ್ರ ಹೊರತು ಪಡಿಸಿ ಆಕ್ಷೇಪಾರ್ಹ ಯಾವುದೇ ಬರಹಗಳು, ಅಥವಾ ಇತರ ವಿಷಯ ಇರಲಿಲ್ಲ, ಈ ಟ್ಯಾಬ್ಲೋ ದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ವಿರುದ್ದ ಯಾವುದೇ ಮಾನಹಾನಕಾರಕ ವಿಷಯಗಳನ್ನು ಹಾಕಿರಲಿಲ್ಲ.
ರಕ್ತ ಬಿಜಾಸುರ ಕಥೆಯ ಪರಿಕಲ್ಪಣೆಯಲ್ಲಿ ಈ ಸ್ಥಬ್ದಚಿತ್ರ ನಿರ್ಮಾಣವಾಗಿತ್ತು. ಆದ್ರೆ ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ ..ನವರಾತ್ರಿ ಸಂದರ್ಭದಲ್ಲಿ ಇವರು ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025