ನೇಹಾ ಮರಣೋತ್ತರ ಪರೀಕ್ಷೆಯಲ್ಲಿ ಬೆ.ಚ್ಚಿಬೀಳುವ ವರದಿ ಪತ್ತೆ; ಇಡೀ ಕರುನಾಡು ಕಣ್ಣೀರು

 | 
Ghi

ಚ್ಚಿಕಳೆದ ಗುರುವಾರ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ್ದ  ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ ನೀಡಿದೆ.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ಸಿಐಡಿಗೆ ನೀಡಿದೆ. 

ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.ನಮ್ಮ ಆಡಳಿತ ಅವಧಿಯಲ್ಲಿ ಕಡಿಮೆ ಅಪರಾಧ ಪ್ರಕರಣಗಳು ನಡೆದಿವೆ. ನಮ್ಮ ಆಡಳಿತ ಅವಧಿಯಲ್ಲಿ 1390 ಪ್ರಕರಣಗಳು ನಡೆದಿವೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ನಡೆದಿವೆ. ನಮ್ಮ ಆಡಳಿತದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಜನ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಲಿಂಗಾಯತ ಸ್ವಾಮೀಜಿಗಳಿಂದ ಒತ್ತಡ ಹೆಚ್ಚಾಗುತ್ತಿದ್ದಂತೆ ಸರ್ಕಾರಕ್ಕೆ ಇದು ತಲೆನೋವಾಗಿ ಪರಿಣಮಿಸಿತು. ಅಲ್ಲದೆ ರಾಜ್ಯದ ವಿವಿಧ ಸಮಾಜ, ಸಂಘಟನೆಗಳ ಒತ್ತಡ ಕೂಡ ಸರ್ಕಾರಕ್ಕೆ ತಲೆನೋವು ಹೆಚ್ಚುವಂತೆ ಮಾಡಿತು. ಈ ಎಲ್ಲ ಒತ್ತಡಕ್ಕೆ ಮಣಿದು ಸರ್ಕಾರ ಸಿಐಡಿ ತನಿಖೆ ನೀಡಿದೆ ಅಂತ ಮೇಲ್ನೋಟಕ್ಕೆ ಕಂಡು ಬರುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.