ಚುನಾವಣೆಯಿಂದ ಪ್ರಜ್ವಲ್ ರೇವಣ್ಣ ಅನರ್ಹ, ಈ ಶಾ.ಕ್ ನಲ್ಲಿ ಅಪ್ಪ ಮಗ ಮೀಡಿಯಾ ಮುಂದೆ ಹೇಳಿದ್ದೇನು ಗೊತ್ತಾ

 | 
Hd

ಒಂದೆಡೆ ಜೆಡಿಎಸ್ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದರೆ ಇತ್ತ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್‌ಗೆ ಬಿಗ್ ಶಾಕ್ ತಗುಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಕಾರಣಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸತ್ ಸದಸ್ಯತ್ವವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಆದ್ದರಿಂದ ಪ್ರಜ್ವಲ್ ರೇವಣ್ಣ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಕೆರಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಒಂದು ತಿಂಗಳು ಕಾಲವಕಾಶವಿದ್ದು, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಬಹುದಾಗಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ನಿಂದ ತಡೆ ತರಬಹುದು. ಒಂದು ವೇಳೆ ತಡೆಯಾಜ್ಞೆ ನೀಡದಿದ್ದರೆ ಆಯ್ಕೆ ಅಸಿಂಧು ಆಗಲಿದೆ. 

ನೆಲಮಂಗಲ ಬಳಿಯ 265 ಎಕರೆ ಜಮೀನು ಘೋಷಣೆ ಮಾಡಿಲ್ಲ. ಬೇನಾಮಿ ಆಸ್ತಿ ಹೊಂದಿದ್ದಾರೆ, ಆದಾಯ ಮುಚ್ಚಿಟ್ಟಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ಮತದಾನ ಮಾಡಿಸಿದ್ದಾರೆ. ಬೂತ್‌ನಲ್ಲಿ ಕುಳಿತು ಮತ ಹಾಕಿಸಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುದೀರ್ಘ 4 ವರ್ಷ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ತೀರ್ಪು ನೀಡಿದೆ. ಈ ಬಗ್ಗೆ ಶಾಸಕ ಎ ಎಂಜು ಮತ್ತು ದೇವರಾಜೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. 

ಯಾರು ಸುಳ್ಳು ಮಾಹಿತಿ ಕೊಡಬಾರದು ಎಂದಿದ್ದಾರೆ. ಕಾನೂನಿಗೆ ತಲೆಬಾಗೋದಾಗಿ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಇದೀಗ ಅನರ್ಹ ಸಂಸದ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟಕ್ಕೆ ಆಣಿಯಾಗ್ತಿದ್ದಾರೆ. ಇನ್ನು ಇದೆಲ್ಲ ದೇವರ ಪರೀಕ್ಷೆ ಅಷ್ಟೇ. ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಚರ್ಚೆ ಮಾಡುತ್ತೇನೆ. ಹಲವು ಕಾರಣ ನೀಡಿ ದೂರು ನೀಡಲಾಗಿತ್ತು ಹಾಗಾಗಿ ಯಾವ ಆಧಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಈ ಬಗ್ಗೆ ವಕೀಲರ ಜೊತೆಗೂ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ನುಡಿದಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.