ಕೆಲವೇ ದಿನಗಳಲ್ಲಿ ಪ್ರಜ್ವಲ್ ರೇವಣ್ಣ ಬಿಡುಗಡೆ, ಸೂರಾಜ್ ರೇವಣ್ಣ ಸ್ಪಷ್ಟತೆ
Mar 10, 2025, 13:30 IST
|

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಯುವಕ ಧನು ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಈ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಸೂರಜ್ ರೇವಣ್ಣ, ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಗುತ್ತೆ ಎಂದು ಭವಿಷ್ಯ ನುಡಿದರು. ಕೆಲವೇ ತಿಂಗಳಲ್ಲಿ ಸರ್ಕಾರ ಬದಲಾಗುತ್ತದೆ. ಆನಂತರ ಅಲ್ಲಿದ್ದವರೆಲ್ಲರೂ ಹೆಚ್ಡಿ ರೇವಣ್ಣ ಜೈ ಅಂತಾರೆ ಎಂದು ಸೂರಜ್ ಹೇಳಿದರು.
ಕ್ರಿಕೆಟ್ ಪಂದ್ಯಾವಳಿಯಿಂದ ಒಂದು ಸಂಘಟನೆ ಮನೋಭಾವ ನಿಮ್ಮಲ್ಲಿ ಬರಲ್ಲ. ನಾವು ದಿನ ಬೆಳಗ್ಗೆ ಆದರೆ ನಿಮ್ಮ ಜೊತೆ ಎಲ್ಲಾ ಕಾರ್ಯಕ್ರಮಗಳನ್ನು ಭಾಗವಹಿಸುತ್ತೇವೆ. ರೇವಣ್ಣ ಅವರು ಎಲ್ಲಾ ಹಳ್ಳಿಗಳಿಗೂ ರಸ್ತೆಗಳನ್ನು ಮಾಡಿದರು. ಈಗೀನ ಜನರೇಷನ್ನಲ್ಲಿ ಎಲ್ಲಾ ಹಳ್ಳಿಗಳಲ್ಲೂ ದೇವಾಲಯ ನಿರ್ಮಾಣ ಮಾಡ್ತಿದ್ದಾರೆ. ನಮ್ಮ ಗ್ರಾಮಕ್ಕೆ ಯಾರು ಹಿತ, ಯಾರು ಅಹಿತ ಅಂತ ಯೋಚನೆ ಮಾಡಬೇಕು. ಶಾಸ್ವತವಾಗಿ ನಿಮ್ಮ ಗ್ರಾಮದ ಕೆಲಸ ಮಾಡಿದವರನ್ನು ಏಕೆ ನೆನಪಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರನ್ನು ಸೂರಜ್ ರೇವಣ್ಣ ಪ್ರಶ್ನೆ ಮಾಡಿದರು.
ಯುವಕರು ಎಲ್ಲರೂ ಒಂದಾಗಿ ಒಗ್ಗಟ್ಟಾಗಿ ಒಂದು ಕಡೆ ಇರಬೇಕು. ಇನ್ನೊಂದು ನಾಲ್ಕೈದು ತಿಂಗಳಲ್ಲಿ ಸರ್ಕಾರ ಚೇಂಜ್ ಆಗುತ್ತದ. ಆ ಕಡೆ ಹೋಗಿರುವವರ ಕಥೆ ಏನು ಎಂದು ಸೂರಜ್ ರೇವಣ್ಣ ವ್ಯಂಗ್ಯ ಮಾಡಿದರು. ಹಾಸನದಲ್ಲಿ ಕಾಂಗ್ರೆಸ್ ಹಮ್ಮಿಕೊಂಡ ಸಮಾವೇಶಕ್ಕೆ ಬದಲಾಗಿ ಜೆಡಿಎಸ್ ಸಮಾವೇಶ ಮಾಡಲಾಗುತ್ತದೆ. ಕೈ ನಾಯಕರು ಇಂಥ 10 ಸಮಾವೇಶ ಮಾಡಿದರೂ ನಾವು ಎದುರಿಸುತ್ತೇವೆ. ಜೆಡಿಎಸ್ ಕಾರ್ಯಕರ್ತರು, ಸಂಘಟನೆ ಜತೆಗಿದೆ. ರಾಜಕೀಯದಲ್ಲಿ ಸೋಲು-ಗೆಲುವುಗಳನ್ನು ಸಮಭಾವದಲ್ಲಿ ಸ್ವೀಕಾರ ಮಾಡಬೇಕು.
ಇಂದು ನಮ್ಮನ್ನು ಸೋಲಿಸಿದವರೇ ನಾಳೆ ಗೆಲ್ಲಿಸುತ್ತಾರೆ. ಕಾಂಗ್ರೆಸ್ನವರು ನಿನ್ನೆ ಸಭೆ ಮಾಡಿ ಹೋಗಿರಬಹುದು. ಆದರೆ, ಹಾಸನದಲ್ಲಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಮಾತನಾಡುತ್ತಾರೆ. ರಾಜಕೀಯವಾಗಿ ದೇವೇಗೌಡರ ಕುಟುಂಬವನ್ನು ಮುಗಿಸಬೇಕು ಅಂಥ ಕೂತರು. ಆದರೆ, ಸಾಧ್ಯವಾಗದೆ ಸುಮ್ಮನಾದರು ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,17 May 2025
ಏಕಾಏಕಿ ಲೈವ್ ಬಂದ್ ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ ಸಿಂಗರ್ ಅರ್ಚನ ಉಡುಪ
Sat,17 May 2025
ಸೆಟ್ ನಲ್ಲಿ ಕಿರಿಕ್, ಅಣ್ಣಯ್ಯ ಸೀರಿಯಲ್ ನಿಂದ ನಿಶಾ ಔಟ್
Sat,17 May 2025