8 ದಿನಗಳ ಬಳಿಕ ದರ್ಶನ್ ದೌ ರ್ಜನ್ಯದ ಬಗ್ಗೆ ಮೌನ ಮುರಿದ ರಚಿತಾ ರಾಮ್!

 | 
Uu

ಈಗ ಎಲ್ಲೆಲ್ಲೂ ದರ್ಶನ್ ಮಯ ಹೌದು ಕನ್ನಡ ಚಿತ್ರರಂಗದ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದಾರೆ. ಇಡೀ ಚಿತ್ರರಂಗದ ಜೊತೆಗೆ ದೇಶವೇ ಪ್ರಕರಣದ ಬಗ್ಗೆ ತಲೆ ಕೆಡಿಸಿಕೊಂಡಿದೆ. ಇಂತಹ ಸಮಯದಲ್ಲಿ ಚಿತ್ರರಂಗದ ಹಲವು ಮಂದಿ ರೇಣುಕಾಸ್ವಾಮಿ ಕೊಲೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ನಟ ಸುದೀಪ್, ಉಪೇಂದ್ರ, ಜಗ್ಗೇಶ್ ಮತ್ತು ನಟಿ ರಮ್ಯಾ ಕೂಡ ದರ್ಶನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದರು. ಈಗ ದರ್ಶನ್ ಚಿತ್ರರಂಗಕ್ಕೆ ಪರಿಚಯಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಭಾರತವಾದ ಮನಸ್ಸಿನಿಂದ ತಮ್ಮ ಹೇಳಿಕೆ ನೀಡಿದ್ದಾರೆ. ನನಗೆ ಗುರು ಸಮಾನರಾದ ದರ್ಶನ್ ಸರ್, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದವರು.

ಅಂತಹ ಅದ್ಭುತ ನಟ ದರ್ಶನ್ ಅವರು ಅಂತಹವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ ಎಂದಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕರಣದ ಬಗ್ಗೆ ಬರೆದುಕೊಂಡಿರುವ ಅವರು, ಧರ್ಮೋ ರಕ್ಷತಿ ರಕ್ಷಿತಃ ಎಂದು ಹೇಳಿದ್ದಾರೆ. ನಮಸ್ಕಾರ. ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! ಎಂದು ತಮ್ಮ ಮಾತುಗಳನ್ನು ಆರಂಭಿಸಿದ್ದಾರೆ.

ಮೊದಲನೇಯಾಶಾಂದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನಿಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ ಎಂದು ನೋವು ತೋಡಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.