ಡಾಲಿ ಧನಂಜಯ್ ಮದುವೆ ಆಮಂತ್ರಣ ಓದಿದ ರಮ್ಯಾ, ಇಷ್ಟು ಬೇಗ ಮದುವೆ ಯಾಕೆ ಎಂದ ಮೋಹಕ ತಾರೆ
Jan 14, 2025, 12:30 IST
|

ಡಾಲಿ ಧನಂಜಯ ಮದುವೆಯ ಸಿದ್ಧತೆಯಲ್ಲಿದ್ದಾರೆ. ಮದುವೆ ದಿನ ಹತ್ತಿರವಾಗುತ್ತಿದ್ದಂತೆ ಲಗ್ನ ಪತ್ರಿಕೆಯನ್ನು ಹಂಚುತ್ತಿದ್ದು ಪ್ರಮುಖ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ಸಿದ್ದಗಂಗಾಶ್ರೀಗಳಿಗೆ ಲಗ್ನಪತ್ರಿಕೆ ನೀಡಿ ಆಶೀರ್ವಾದ ಪಡೆಯುವ ಮೂಲಕ ಆಮಂತ್ರಣ ಪತ್ರಿಕೆ ಹಂಚಲು ಆರಂಭಿಸಿದ್ದು, ಈಗಾಗಲೇ ಪ್ರಮುಖ ರಾಜಕೀಯ ನಾಯಕರು, ಸಿನಿ ಪ್ರಮುಖರಿಗೆ ಆಹ್ವಾನ ನೀಡಿದ್ದಾರೆ.
ಶನಿವಾರ ಕೂಡ ಧನಂಜಯ ಹಲವು ಪ್ರಮುಖರನ್ನು ಭೇಟಿ ಮಾಡಿ ಮದುವೆಗೆ ಆಹ್ವಾನ ನೀಡಿದ್ದಾರೆ. ಸ್ಯಾಂಡಲ್ವುಡ್ ಕ್ವೀನ್, ನಟಿ ರಮ್ಯಾರನ್ನು ಭೇಟಿ ಮಾಡಿರುವ ಧನಂಜಯ ತಮ್ಮ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ರಮ್ಯಾರನ್ನು ಭೇಟಿ ಮಾಡಿ ಲಗ್ನಪತ್ರಿಕೆ ನೀಡಿರುವ ಫೋಟೊವನ್ನು ಧನಂಜಯ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
https://youtube.com/shorts/oxlaLH4L9pE?si=n-Hb-RdU_ESK5VlT
ಶನಿವಾರ ಕೂಡ ಹಲವು ಗಣ್ಯರನ್ನು ಭೇಟಿಯಾಗಿರುವ ಅವರು ಮದುವೆಗೆ ಆಹ್ವಾನಿಸಿದ್ದಾರೆ. ಹಿರಿಯ ನಟ ವಿ ರವಿಚಂದ್ರನ್, ಮನೋರಂಜನ್ ರವಿಚಂದ್ರನ್, ಶಾಸಕ ಪ್ರದೀಪ್ ಈಶ್ವರ್, ಸಚಿವ ರಾಮಲಿಂಗಾರೆಡ್ಡಿ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ, ಹಿರಿಯ ನಟ ಜಗ್ಗೇಶ್, ಶಾಮನೂರು ಶಿವಶಂಕರಪ್ಪ ಸೇರಿ ಹಲವರನ್ನು ಭೇಟಿಯಾಗಿ ಮದುವೆಗೆ ಆಹ್ವಾನ ನೀಡಿದರು.
ಈಗಾಗಲೇ ಸಿನಿಗಣ್ಯರು, ರಾಜಕಾರಣಿಗಳು ಹಾಗೂ ಮಠಾಧೀಶರುಗಳಿಗೆ ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದು ಇನ್ನೂ ಹಲವರಿಗೆ ಆಹ್ವಾನ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ನಟ ರಾಘವೇಂದ್ರ ರಾಜ್ಕುಮಾರ್, ಯುವ ರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಸೇರಿದಂತೆ ಹಲವು ಸಿನಿಮಾ ಸೆಲೆಬ್ರಿಟಿಗಳಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ನಟ ಧನಂಜಯ್ ಯಾವ ಗಾಡ್ಫಾದರ್ ಇಲ್ಲದೆ ಚಿತ್ರರಂಗಕ್ಕೆ ಬಂದು ಹೀರೋ ಆದವರು. ಆರಂಭದಲ್ಲಿ ನಾಯಕನಾಗಿ ಹಲವು ಚಿತ್ರ ಮಾಡಿದರೂ ಸಿಗದ ಯಶಸ್ಸು ಟಗರು ಸಿನಿಮಾದಲ್ಲಿ ಖಳನಟನಾಗಿ ಅಬ್ಬರಿಸಿದ ಬಳಿಕ ಸಿಕ್ಕಿತು. ಧನಂಜಯನಾಗಿದ್ದ ಅವರು ರಾತ್ರೋ ರಾತ್ರಿ ಡಾಲಿ ಧನಂಜಯ್ ಆಗಿ ಜನಪ್ರಿಯತೆ ಗಳಿಸಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.