ಗಂಡನನ್ನು ಬಿಟ್ಟು ಸ್ವಾಮೀಜಿ ಹಿಂದೆ ಬಂದ ಮುದ್ದಾದ ಸುಂದರಿ, ಮ.ಜಾ ಮಾಡಿ ಎಲ್ಲವೂ ಮುಗಿಸಿದ ಸ್ವಾಮಿ
Dec 4, 2023, 13:23 IST
|

ಶಕೀರಾ ಹೆಸರಲ್ಲಿದ್ದ ಅಪಾರ ಆಸ್ತಿಯನ್ನು ಕಬಳಿಸಲು ಈ ದುಷ್ಟ ಕೆಲಸ ಮಾಡಿದ್ದ. ಶಕೀರಾಳನ್ನು ಪ್ರಜ್ಞೆ ತಪ್ಪಿಸಿ ಜೀವಂತವಾಗಿ ಹೂಳುವ ಮೂಲಕ ಕೊಲೆ ಮಾಡಿದ್ದ. ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಶ್ರದ್ಧಾನಂದ 2001 ರಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದಿಂದ ತವರು ರಾಜ್ಯವಾದ ಮಧ್ಯಪ್ರದೇಶದ ಸಾಗರ್ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಗೊಂಡಿದ್ದ. 83 ವರ್ಷದ ಶ್ರದ್ದಾನಂದ ಕಳೆದ 27 ವರ್ಷಗಳಿಂದ ಜೈಲು ವಾಸಿಯಾಗಿದ್ದಾರೆ. ಆತನಿಗೆ ಜೀವಾವಧಿ, ಅಂದರೆ 30 ವರ್ಷ್ಗಳ ಶಿಕ್ಷೆಯಾಗಿದೆ.
ಅಂದು 600 ಕೋಟಿ ರೂ ಮೌಲ್ಯ ಹೊಂದಿದ್ದ ಆಸ್ತಿಯನ್ನು ಹೊಡೆದುಕೊಳ್ಳಲು ಶಕೀರಾ ಅವರನ್ನು ಜೀವಂತವಾಗಿ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿರುವ ವೈಭವೋಪೇತ ಬಂಗಲೆಯ ಮಧ್ಯದಲ್ಲಿ ಶವಪೆಟ್ಟಿಗೆಯಲ್ಲಿ ಇಟ್ಟು ಹೂತಿದ್ದಾಗಿ ತನಿಖೆಯ ವೇಳೆ ಶ್ರದ್ಧಾನಂದ ಒಪ್ಪಿಕೊಂಡಿದ್ದರು. ಅಪರಾಧಿಯನ್ನು 1994ರ ಏಪ್ರಿಲ್ 30ರಂದು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಆಸ್ತಿಯ ಅಧಿಕಾರ ಮತ್ತು ವಿಲ್ ಅನ್ನು ಶ್ರದ್ಧಾನಂದ ಹೆಸರಿಗೆ ವರ್ಗಾಯಿಸಿದ ಬಳಿಕ ಆಕೆಯನ್ನು ಕೊಲೆ ಮಾಡಲಾಗಿತ್ತು ಎಂಬ ವಿಚಾರವನ್ನು ಪೊಲೀಸರು ತನಿಖೆಯ ವೇಳೆ ಪತ್ತೆ ಹಚ್ಚಿದ್ದರು.
ಈ ಘಟನೆಯು ಭಾರತದ ಕ್ರಿಮಿನಲ್ ಇತಿಹಾಸದಲ್ಲಿ ಅತ್ಯಂತ ಘೋರ ಪ್ರಕರಣಗಳಲ್ಲಿ ಒಂದಾಗಿ ವರದಿಯಾಗಿದೆ ಎಂದು ಬಾರ್ & ಬೆಂಚ್ ಹೇಳುತ್ತದೆ. ಅದರ ಪ್ರಕಾರ, ಅಪರಾಧ ಪ್ರಕರಣದಲ್ಲಿ ಮೃತದೇಹವನ್ನು ಹೊರ ತೆಗೆಯುವುದನ್ನು ವಿಡಿಯೊದಲ್ಲಿ ದಾಖಲಿಸಿದ ಮೊದಲ ಪ್ರಕರಣ ಇದಾಗಿದ್ದು, ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಮೈಲುಗಲ್ಲಾಗಿದೆ. ಭೂಮಿಯಿಂದ ಹೊರತೆಗೆಯಲಾದ ಕಳೇಬರದ ವಿಡಿಯೊ ಮತ್ತು ವಂಶವಾಹಿ ಪರೀಕ್ಷೆಯನ್ನು ಸಾಕ್ಷ್ಯವನ್ನಾಗಿ ಪರಿಗಣಿಸಿದ ದೇಶದ ಮೊದಲ ಪ್ರಕರಣ ಸಹ ಇದು ಎಂದು ದಾಖಲಾಗಿದೆ.
1997ರಲ್ಲಿ ಪ್ರಕರಣದ ವಿಚಾರಣೆ ಆರಂಭವಾಯಿತು. 2005ರಲ್ಲಿ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ ಎಸ್ ತೋಟದ್ ಅವರು ಶ್ರದ್ಧಾನಂದಗೆ ಗಲ್ಲು ಶಿಕ್ಷೆ ವಿಧಿಸಿದ್ದರು..ಮುಂದೆ ಗಲ್ಲು ಶಿಕ್ಷೆಯನ್ನು ರದ್ದು ಮಾಡಿದ ಸುಪ್ರೀಂಕೋರ್ಟ್ 30 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಕೀರಾ ನಮಾಜಿ ಅವರು ತಮ್ಮ ಮೊದಲ ಪತಿಯಾದ, ಇರಾನ್ ಮತ್ತು ಆಸ್ಟ್ರೇಲಿಯಾದಲ್ಲಿ ಭಾರತದ ರಾಯಭಾರಿಯಾಗಿದ್ದ ಅಕ್ಬರ್ ಖಲೀಲಿ ಅವರಿಗೆ 1985ರಲ್ಲಿ ವಿಚ್ಚೇದನ ನೀಡಿದ್ದರು.
ನಂತರ ಅವರು ಶ್ರದ್ಧಾನಂದ ಅವರನ್ನು ವರಿಸಿದ್ದರು. ಅವರ ಸಹಿ ಹಾಗೂ ಅವರ ಸ್ವಂತಿಕೆಯನ್ನು ಕಬಳಿಸಿ ಇಲ್ಲವೇನಿಸಿದ ಮಹಾಪಾಪಿ ಈಗ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ. ಸಿಗದಿರಲಿ ಎನ್ನುವುದು ಎಲ್ಲರ ಪ್ರಾರ್ಥನೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,31 May 2025
ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಫಾರಿನ್ ಟ್ರಿಪ್, ಪವಿತ್ರ ಗೌಡ ಕ ಣ್ಣೀರು
Sat,31 May 2025
ಮಡೆನೂರು ಮನು ಹಾಗೂ ಮಿಂಚು ಕರ್ಮಕಾಂಡ ಆಡಿಯೋ ಬ ಯಲು
Sat,31 May 2025