ಮನೆ ಮಾಲೀಕ ಅದಕ್ಕೆ ಒಪ್ಪದಿದ್ದಕ್ಕೆ ಈ ಸುಂದರಿ ಮಾಡಿದ ಕೆಲಸಕ್ಕೆ ಇಡೀ ದೇಶವೇ ಶಾ ಕ್

 | 
Gh

ಪ್ರೀತಿ ಮಾಡಿ ತಪ್ಪಿಲ್ಲ ಆದ್ರೆ ಪ್ರೀತಿಗಾಗಿ ಇನ್ನೊಬ್ಬರ ಜೀವ ತೆಗೆಯೋದು ತಪ್ಪು. ಹೌದು ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆ ಕತ್ತು ಹಿಸುಕಿ ಕೊಲೆಗೈದ ಘಟನೆ ನಡೆದಿತ್ತು. ಸದ್ಯ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಮನೆಯಲ್ಲಿ ಬಾಡಿಗೆ ಇದ್ದ ಯುವತಿಯೇ ತನ್ನ ಲವರ್‌ಗೆ ಗಾಡಿ ಕೊಡಿಸಲು ಕೊಲೆ ಮಾಡಿದ್ದಾಳೆ ಎಂಬುದು ಪತ್ತೆಯಾಗಿದೆ.

ದಿವ್ಯಾ ಕೊಲೆಯಾದ ಮನೆ ಓನರ್‌. ಸಲೂನ್‌ ಶಾಪ್‌ ಹೊಂದಿರುವ ಗುರುರಾಜ್‌, ಪತ್ನಿ ದಿವ್ಯಾ ಜತೆ ಕೋನಸಂದ್ರದಲ್ಲಿಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ದಿವ್ಯಾ ಕತ್ತುಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದರು. ವಿವಿಧ ಆಯಾಮದಲ್ಲಿ ತನಿಖೆ ನಡೆಸಿದ ಪೊಲೀಸರು ದಿವ್ಯಾ ಅವರ ಮನೆಯ ಮೇಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೋನಿಕಾ ಎಂಬ ಯುವತಿಯನ್ನು ಬಂಧಿಸಿದ್ದಾರೆ.

ಕೋಲಾರ ಮೂಲದ ಮೋನಿಕಾ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದು, ಕಳೆದ‌‌ ಮೂರು ತಿಂಗಳಿಂದ ಮೃತೆ ದಿವ್ಯಾ ಮನೆಯಲ್ಲಿ ಬಾಡಿಗೆಯಿದ್ದಳು. ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಕೆಲಸ ತೊರೆದಿದ್ದಳು. ಬಳಿಕ ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ಈ ಕೃತ್ಯ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಮೋನಿಕಾ ಲವರ್‌ ಟಾಟಾ ಎಸಿ ವಾಹನ‌ ಖರೀದಿಗೆ ಹಣದ‌‌ ಮುಗ್ಗಟ್ಟು ಎದುರಿಸಿದ್ದ. ಜೊತೆ ಈಕೆಯ ಮೇಲಿನ ಸಾಲ ಒತ್ತಡ ಸೃಷ್ಟಿಸಿತ್ತು. ಮನೆ ಮಾಲಕಿ ದಿವ್ಯಾ ಮೈ‌‌ ಮೇಲಿದ್ದ ಒಡವೆ ಮೇಲೆ ಮೋನಿಕಾಳ ಕಣ್ಣು ಕುಕ್ಕಿಸಿತ್ತು. ಸಲುಗೆ ಬೆಳೆಸಿಕೊಂಡು ಮನೆ ಮಾಲೀಕರ ಚಲನಾವಲನಾಗಳ ಗಮನಿಸಿ ಯುವತಿ ಹತ್ಯೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ದಿವ್ಯಾ ಗಂಡ ಗುರುಮೂರ್ತಿ ಎಂದಿನಂತೆ ಕೆಲಸಕ್ಕಾಗಿ ಹೀಗಿದ್ದ ವೇಳೆ‌ ದಿವ್ಯಾ‌ ಒಬ್ಬಂಟಿಯಾಗಿರುವುದನ್ನ ಅರಿತಿದ್ದ ಮೋನಿಕಾ, ಮನೆಗೆ ಹೋಗಿ‌ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಳು. ಬಳಿಕ ಆಕೆ ಮೈಮೇಲಿದ್ದ 36 ಗ್ರಾಂ ಚಿನ್ನದ ಸರ ಕಸಿದು‌ ಸುಮ್ಮನಾಗಿದ್ದಳು. ಗುರುಮೂರ್ತಿ ಬಂದ ಬಳಿಕಕೊ ಲೆಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಕುತ್ತಿಗೆ ಮೇಲೆ ಗಾಯದ ಗುರುತುವಿರುವುದು ಹಾಗೂ ಚಿನ್ನದ‌ ಸರ ಇಲ್ಲದಿರುವುದನ್ನ ಕಂಡು ಪತ್ನಿಯನ್ನ ಹತ್ಯೆ ಮಾಡಿದ್ದಾರೆಂದು ದೂರು ನೀಡಿದ‌ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಡಿಗೆಗಿದ್ದ ಯುವತಿಯನ್ನ ಬಂಧಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.