ಹಿಂದಿವಾಲನ ಜೊತೆ ಮದುವೆ ಮುನ್ನವೇ ಹನಿಮೂನ್ ಪ್ಲಾನ್ ಮಾಡಿದ ವೈಷ್ಣವಿ ಗೌಡ

 | 
Ns
ನನ್ನದು ಲವ್ ಮ್ಯಾರೇಜ್ ಅಲ್ಲ, ಅರೇಂಜ್ ಮ್ಯಾರೇಜ್ ಎಂದು ಸೀತಾರಾಮ ಖ್ಯಾತಿಯ ನಟಿ ವೈಷ್ಣವಿ ಗೌಡ ಎಲ್ಲಾ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ.ಕಳೆದ ಸೋಮವಾರವಷ್ಟೇ ಏರ್‌ಫೋರ್ಸ್ ಲೆಫ್ಟಿನೆಂಟ್ ಆಗಿರುವ ಛತ್ತೀಸ್‌ಗಢ ಮೂಲದ ಅನುಕೂಲ್ ಜೊತೆ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಬಗ್ಗೆ ನಟಿ ಸಂದರ್ಶನ ಒಂದರಲ್ಲಿ ಮಾತನಾಡಿ, ಒಂದು ವರ್ಷದಿಂದ ಅನುಕೂಲ್ ಪರಿಚಯವಿದೆ. ಇದು ಲವ್ ಮ್ಯಾರೇಜ್ ಎಂದು ಎಲ್ಲರೂ ಅಂದುಕೊಂಡಿದ್ದಾರೆ. 
ಆದರೆ ಇದು ಅರೇಂಜ್ ಮ್ಯಾರೇಜ್. ಇದು ಹಿರಿಯರು ನೋಡಿ ನಿಶ್ಚಯಿಸಿದ ಮದುವೆ ಎಂದು ಸ್ಪಷ್ಟನೆ ನೀಡಿದ್ದಾರೆ.ಮ್ಯಾಟ್ರಿಮೋನಿ ಮೂಲಕ ಜಾತಕ ಶೇರ್ ಆದ ಬಳಿಕ ಅಪ್ಪ ಅಮ್ಮ ಈ ಮದುವೆ ನಿಶ್ಚಯಿಸಿದ್ದಾರೆ. ನಾವಿಬ್ಬರೂ ಒಬ್ಬರಿಗೊಬ್ಬರು ಅರ್ಥ ಮಾಡಿಕೊಳ್ಳಲು 1 ವರ್ಷ ಸಮಯ ತೆಗೆದುಕೊಂಡಿದ್ದೆವು. ಮದುವೆ ತಯಾರಿ ನಡೀತಿದೆ. ಶೀಘ್ರದಲ್ಲೇ ಮದುವೆ ಆಗುತ್ತೇನೆ ಎಂದರು. ಎಲ್ಲಿಗೂ ಹೋಗುವುದಿಲ್ಲ ಎಂದಿದ್ದಾರೆ.
ಮದುವೆಯ ಬಳಿಕವೂ ಆಕ್ಟ್ ಮಾಡಲು ಅನುಮತಿ ಇದೆ. ಅವರು ನನ್ನ ಸೀರಿಯಲ್ ದಿನಾ ನೋಡುತ್ತಾರಂತೆ. ಸೀರಿಯಲ್ ಬಗ್ಗೆ ನನಗಿಂತ ಹೆಚ್ಚು ಅವರು ಅಪ್‌ಡೇಟ್ ಇದ್ದಾರೆ. ಮದುವೆ ಬಗ್ಗೆ ಅಮೂಲ್ಯ ಸೇರಿ ಕೆಲವರಿಗೆ ಮಾತ್ರ ಗೊತ್ತಿತ್ತು. ಅನುಕೂಲ್ ಅವರು ಬೆಂಗಳೂರಿನಲ್ಲೇ ಇರೋದ್ರಿಂದ ಮದುವೆ ಬಳಿಕವೂ ಇಲ್ಲೇ ಇರುತ್ತೇವೆ. ದೇವರು ತಡ ಮಾಡೋದು ಒಳ್ಳೆಯದನ್ನ ಮಾಡೋದಕ್ಕಾಗಿ ಎಂದು ನಂಬುತ್ತೇನೆ ಎಂದು ಹೇಳಿದರು.
ನಾನು ಅವರನ್ನು ಹೆಸರು ಹೇಳೇ ಕರೆಯುತ್ತೇನೆ. ಅವರು ನನ್ನ ವೈಶ್ ಅಂತಾರೆ. 300 ಪ್ರಪೋಸಲ್ ಬಂದ್ರೂ ಇಷ್ಟ ಆಗಿಲ್ಲ ಅಂತ ಸುದೀಪ್ ಸರ್ ಬಳಿ ಹೇಳಿದ್ದೆ ಅಲ್ವಾ. ಯೋಚನೆ ಮಾಡಿ ಇವರು ಎಂಥಾ ಹುಡುಗ ಅಂತ. ನಾನು ಎಂಥಾ ಹುಡುಗ ಸಿಗ್ಬೇಕು ಅಂತ ಬಯಸಿದ್ನೋ ಅದೇ ಥರ ಹುಡುಗ ಇವರು ಎಂದು ಭಾವಿ ಪತಿಯ ಬಗ್ಗೆ ಮಾತನಾಡಿದರು.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.