ಕೊನೆಗೂ ಲಕ್ಷ ಬೆಲೆಯ ಕಾರು ಬೈಕ್ ಅನ್ನು ವರ್ಷಾಳಿಕೆ ಕೊಟ್ಟ ವರುಣ್, ಮತ್ತೆ ಆಟೋ ರಿಕ್ಷಾ ಡ್ರೈವರ್

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ರೀಲ್ಸ್ ಮೂಲಕವೇ ಗಮನ ಸೆಳೆದ ವರ್ಷಾ ಕಾವೇರಿ ಮತ್ತು ವರುಣ್ ಆರಾಧ್ಯ ಜೋಡಿ ತಮ್ಮ ಪ್ರೀತಿಗೆ ತಿಲಾಂಜಲಿ ಇಟ್ಟಿದೆ. ಕಳೆದ ಕೆಲ ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ದೂರ ದೂರವಾಗಿದೆ. ಈ ವಿಚಾರವನ್ನು ಬುಧವಾರವಷ್ಟೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು ವರ್ಷಾ.
ಮನದೊಳಗಿನ ನೋವನ್ನು ಪತ್ರದ ರೀತಿಯಲ್ಲಿ ಬರೆದುಕೊಂಡು, ವರುಣ್ಗೂ ಮತ್ತು ಅವಳ ಹುಡುಗಿಗೂ ಒಳ್ಳೆಯದಾಗಲಿ ಎಂದು ಹೇಳಿದ್ದರು. ಇದೀಗ ವರುಣ್ ಆರಾಧ್ಯ ಸರದಿ.ಎಲ್ಲರಿಗೂ ನಮಸ್ಕಾರ ನೀವು ವರ್ಷಾ ಕಾವೇರಿ ಮತ್ತು ನನಗೆ ತೋರಿಸಿದ ಸಪೋರ್ಟ್ಗೆ ತುಂಬಾ ವಂದನೆಗಳು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಲಹೆ ಮತ್ತು ದೃಷ್ಟಿಕೋನವಿದೆ, ಹೀಗಾಗಿ ನಮ್ಮ ನಿರ್ಧಾರವನ್ನು ನೀವು ಒಪ್ಪಿಕೊಂಡು ನಮಗೆ ಸಪೋರ್ಟ್ ಮಾಡಬೇಕು.
ವರ್ಷಾ ಮತ್ತು ನಾನು ಪರಸ್ಪರ ತೀರ್ಮಾನ ಮಾಡಿಕೊಂಡು ದೂರ ಆಗಿರುವುದು ಇದಕ್ಕೆ ನಮ್ಮ ಸ್ನೇಹಿತರು ಅಥವಾ ನಮ್ಮ ಕುಟುಂಬದವರು ಕಾರಣವಲ್ಲ ಹಾಗೂ ಅವರನ್ನು ಈ ವಿಚಾರದಲ್ಲಿ ಎಳೆಯಬೇಡಿ. ಒಳ್ಳೆಯ ರೀತಿಯಲ್ಲಿ ಸಂಬಂಧ ಶುರು ಮಾಡಿ ಒಳ್ಳೆಯ ರೀತಿಯಲ್ಲಿ ಅಂತ್ಯವಾಡುತ್ತಿದ್ದೀವಿ. ವರ್ಷಾ ಕಾವೇರಿ ಮುಂದಿನ ಕೆಲಸಗಳಿಗೆ ಒಳ್ಳೆಯದಾಗಲಿ ಎಂದು ಹೇಳಲು ಇಷ್ಟ ಪಡುತ್ತೀನಿ. ಇಲ್ಲಿಯತನಕ ನೀವು ನೀಡಿದ ಪ್ರೋತ್ಸಾಹ ಮತ್ತು ಬೆಂಬಲ..ಇನ್ನುಮುಂದೆನೂ ಸದಾ ಇರಲಿ.
ಇಂತಿ ನಿಮ್ಮ ಪ್ರೀತಿಯ ವರುಣ್ ಆರಾಧ್ಯ ಎಂದಿದ್ದರು.
ವರುಣ್ ಹೀಗೆ ಪೋಸ್ಟ್ ಹಂಚಿಕೊಳ್ಳುತ್ತಿದ್ದಂತೆ, ಅವರ ಇನ್ಸ್ಟಾಗ್ರಾಂನ ಫಾಲೋವರ್ಸ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗಂಡು ಜಾತಿಗೇ ನೀನು ಅವಮಾನ, ಕರ್ಮ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಕಾಲೆಳೆದಿದ್ದಾರೆ. ಇದರಿಂದಾಗಿ ಕೋಪಗೊಂಡ ವರುಣ್ ವರ್ಷಾ ಕೊಡಿಸಿದ್ದ ಬೈಕ್ ಹಾಗೂ ಕಾರ್ ಅನ್ನು ವಾಪಸ್ಸು ನೀಡಿದ್ದಾರೆ ಎನ್ನಲಾಗ್ತಿದೆ.
ಬಿಗ್ಬಾಸ್ ಮನೆಗೆ ಒಟ್ಟಾಗಿ ಹೋಗಲಿರವ ಜೋಡಿ ಎಂದುಕೊಂಡಿದ್ದ ಜನರಿಗೆ ಇದರಿಂದ ಬೇಸರವಾಗಿದ್ದಂತೂ ಸುಳ್ಳಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.