ಪಕ್ಕದ ಮನೆ ಆಂಕಲ್‌ ಜೊತೆ ಮ ಲಗಿದ ಹೆಂಡತಿ, ಮಧ್ಯಾಹ್ನ ಊಟಕ್ಕೆ ಬಂದ ಗಂಡನಿಗೆ ಶಾ ಕ್

 | 
ರ್
ಮನೆಯಲ್ಲಿ ಯಾರೂ ಇಲ್ಲದ ವೇಳೆ ಪರ ಪುರುಷನೊಂದಿಗೆ ಚಕ್ಕಂದವಾಡುತ್ತಿದ್ದ ಪತ್ನಿ ಹಾಗೂ ಆ ಗಂಡಸನ್ನು ಪತಿಯೊಬ್ಬ ದೊಣ್ಣೆಯಿಂದ ಹೊಡೆದು, ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಶ್ರೀಮಂತ ಎಂಬಾತ, ಪತ್ನಿ ಸೃಷ್ಟಿ ಹಾಗೂ ಆಕೆಯ ಪ್ರಿಯಕರ ಖಾಜಪ್ಪನನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದಾನೆ. ಪೊಲೀಸರು ಈತನಿಗಾಗಿ ಬಲೆ ಬೀಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಾದನಹಿಪ್ಪರಗಾ ಗ್ರಾಮದ ಶ್ರೀಮಂತನ ಜೊತೆ 22 ವರ್ಷದ ಸೃಷ್ಟಿ ಸಪ್ತಪದಿ ತುಳಿದಿದ್ದಳು. ಕೃಷಿ ಕೂಲಿ ಕೆಲಸ ಮಾಡುತ್ತಿದ್ದ ಶ್ರೀಮಂತ ದಿನದಲ್ಲಿ ಬಹುತೇಕ ಸಮಯ ಬೇರೆಯವರ ಜಮೀನಿನಲ್ಲಿ ಕಳೆಯುತ್ತಿದ್ದ. ಇತ್ತ ಪತ್ನಿ ಸೃಷ್ಟಿ ಗ್ರಾಮದ ಲೈಬ್ರರಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಖಾಜಪ್ಪ ಎಂಬಾತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. 
ಅದರಂತೆ ಮೇ 1ರಂದು ಶ್ರೀಮಂತ ಕೆಲಸದ ಮೇಲೆ ಬೇರೆ ಊರಿಗೆ ತೆರಳಿದ್ದ ವೇಳೆ ಇತ್ತ ಸೃಷ್ಟಿ, ರಾತ್ರಿ ಪ್ರಿಯಕರ ಖಾಜಪ್ಪನಿಗೆ ಕರೆ ಮಾಡಿ ಮನೆಗೆ ಆಹ್ವಾನಿಸಿದ್ದಾಳೆ. ಸೃಷ್ಟಿ ಮನೆಗೆ ದಿಢೀರ್ ಅಂತ ಹೋದರೆ ಯಾರಿಗಾದರೂ ಅನುಮಾನ ಬರಬಹುದು ಎಂದು, ಜೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿ ಟ್ರಾನ್ಸ್‌ಫಾರಂಗೆ ಬೆಂಕಿ ಬಿದ್ದಿದೆ ಕರೆಂಟ್ ತೆಗೆಯಿರಿ ಎಂದು ಹೇಳಿದ್ದಾನೆ. ಕೂಡಲೇ ಜೆಸ್ಕಾಂ ಸಿಬ್ಬಂದಿ ಕರೆಂಟ್‌ ತೆಗೆಯುತ್ತಿದ್ದಂತೆಯೇ ಖಾಜಪ್ಪ ಕತ್ತಲಲ್ಲಿ ಓಡಿ ಹೋಗಿ ಸೃಷ್ಟಿ ಮನೆ ಸೇರಿಕೊಂಡಿದ್ದಾನೆ.
ಮನೆ ಮುಂದೆ ಬೈಕ್ ನಿಂತಿರುವುದನ್ನು ಕಂಡು ಅಕ್ಕಪಕ್ಕದವರು ಶ್ರೀಮಂತನಿಗೆ ಕಾಲ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಶ್ರೀಮಂತ ಮನೆ ಹತ್ತಿರ ಬಂದು ಹೊರಗಡೆಯಿಂದ ಮನೆ ಲಾಕ್ ಮಾಡಿದ್ದಾನೆ. ಸ್ವಲ್ಪ ಸಮಯದ ಬಳಿಕ ಲಾಕ್ ತೆಗೆಯುತ್ತಿದ್ದಂತೆಯೇ ಪರಾರಿಯಾಲು ಯತ್ನಿಸಿದ ಖಾಜಪ್ಪನನ್ನು ಶ್ರೀಮಂತ ಬೆನ್ನಟ್ಟಿ ದೊಣ್ಣೆಯಿಂದ ತಲೆ ಹೊಡೆದಿದ್ದಾನೆ. ಏಟು ಬೀಳುತ್ತಿದ್ದಂತೆ ಕೆಳಗೆ ಬಿದ್ದಿದ್ದ ಖಾಜಪ್ಪನನ್ನು ಶ್ರೀಮಂತ ಭುಜದ ಮೇಲೆ ಹೊತ್ತುಕೊಂಡು ಬಂದು ಪತ್ನಿಯನ್ನು ನಡಿ ಪೊಲೀಸ್ ಠಾಣೆಗೆ ಹೋಗಿ ಇವನ ವಿರುದ್ಧ ಕಂಪ್ಲೇಂಟ್ ಕೊಡೊಣ ಎಂದಿದ್ದಾನೆ. ಆಗ ಸೃಷ್ಟಿ ಹೋಗಲು ಒಪ್ಪದಿದ್ದಕ್ಕೆ ಮತ್ತಷ್ಟು ಆಕ್ರೋಶಗೊಂಡ ಶ್ರೀಮಂತ, ಮನೆಯಲ್ಲಿದ್ದ ಕೊಡಲಿಯಿಂದ ಕೊಚ್ಚಿ ಇಬ್ಬರನ್ನೂ ಮನೆಯಂಗಳದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub