ಪತ್ನಿಗೆ ಡಿವೋರ್ಸ್ ಕೊಟ್ಟ ಯುವ; ನಡು ರೋಡಲ್ಲಿ ಸಿ ಡಿದೆದ್ದ ಶಿವಣ್ಣ

 | 
Us

ದೊಡ್ಮನೆ ಮೊಮ್ಮಗ ರಾಘವೇಂದ್ರ ರಾಜ್ ಕುಮಾರ್ ಮಗ ಯುವರಾಜ್‌ಕುಮಾರ್ ಇದೀಗ ಪತ್ನಿ ಶ್ರೀದೇವಿಗೆ  ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್‌ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಚಾರವಾಗಿ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. 

ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ. ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ. ಇದೇ ವೇಳೆ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಯುವ ಡಿವೋರ್ಸ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. 

ಹಾಗಾಗಿ ತಿಳಿದುಕೊಂಡು ಮಾತನಾಡುತ್ತೇವೆ. ಗೊತ್ತಿಲ್ಲದೇ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.7 ವರ್ಷಗಳು ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.

ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಕೆಲವು ತಿಂಗಳುಗಳಿಂದ ಜೊತೆಯಾಗಿ ಕೂಡ ವಾಸಿಸುತ್ತಿಲ್ಲ. ಯುವ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ. ಸದ್ಯ ಯುವ ಪತ್ನಿ ವಿದೇಶದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಮೈಸೂರು ಮೂಲದ ಶ್ರೀದೇವಿರನ್ನು ಯುವ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. 

ಗುರುಹಿರಿಯರ ಒಪ್ಪಿಗೆಯ ಮೇರೆಗೆ 2018ರಲ್ಲಿ ಯುವರಾಜ್‌ಕುಮಾರ್ ನಿಶ್ಚಿತಾರ್ಥ ನಡೆಯಿತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.